ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಹೃದಯ ವಿದ್ರಾವಕ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಲ್ಲೇನಹಳ್ಳಿ ಗ್ರಾಮದ ಆಶಾ (50) ಹಾಗೂ ಮಗಳು ವರ್ಷಿತಾ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಶಾ ಅವರ ಪುತ್ರ ಮೋಹನ್ಗೌಡ (27) ಮತ್ತು ಮೊಮ್ಮಗ ಮಯಾನ್ಗೌಡ (11) ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಒಂದು ಕಡೆ ಐಷಾರಾಮಿ ಜೀವನ, ಮತ್ತೊಂದು ಕಡೆ ಅತಿಯಾದ ಸಾಲ, ಇನ್ನೊಂದು ಕಡೆ ಚೀಟಿ ವ್ಯವಹಾರ. 5 ಲಕ್ಷ, 10 ಲಕ್ಷ, 50 ಲಕ್ಷದ ಚೀಟಿ ಜೊತೆಗೆ ಯುಗಾದಿಗೆ ಮಟನ್ ಚೀಟಿ, ದೀಪಾವಳಿಗೆ ಪಟಾಕಿ ಚೀಟಿ ಹೀಗೆ ಕೋಟಿ ಕೋಟಿ ವ್ಯವಹಾರ ಮಾಡುತ್ತಿದ್ದವರು ಇಂದು ಮನೆಯಲ್ಲೇ ಶವವಾಗಿರುವುದು ದುರ್ದೈವ.
ಮನೆ ಮಗ ಮೋಹನ್ಗೌಡ ಕೋಟ್ಯಾಂತರ ರೂ. ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಸಾಲಗಾರರು ಹಣ ವಾಪಸ್ ಕೇಳುತ್ತಿದ್ದರು. ಹಣ ಹಿಂದಿರುಗಿಸಲು ಸಾಧ್ಯವಾಗದೆ ಸಾಲಗಾರರ ಉಪಟಳದಿಂದ ಈ ಕುಟುಂಬ ಆತ್ಮಹತ್ಯೆಗೆ ನಿರ್ಧರಿಸಿದೆ.
ಅದರಂತೆ ನಿನ್ನೆ ರಾತ್ರಿ ಈ ಕುಟುಂಬ ನಾವು ಸಾಲಗಾರರ ಕಾಟ ತಾಳಲಾರದೆ ಆತಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋ ಮಾಡಿದೆ. ನಂತರ ಮನೆ ಬಾಗಿಲನ್ನು ಲಾಕ್ ಮಾಡಿಕೊಂಡಿದ್ದಾರೆ.
ಮೋಹನ್ಗೌಡ ತನ್ನ ತಾಯಿ, ಅಕ್ಕ ಹಾಗೂ ಅಕ್ಕನ ಮಗನ ಕತ್ತು ಕೊಯ್ದು ಬಳಿಕ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.
ವಿಡಿಯೋ ಹರಿಬಿಟ್ಟ ಕೆಲವೇ ನಿಮಿಷಗಳಲ್ಲಿ ಸಂಬಂಧಿಕರು ಗಮನಿಸಿ ಗಾಬರಿಯಾಗಿ ತಕ್ಷಣ ಇವರ ಮನೆ ಬಳಿಗೆ ಬಂದು ಕಾಲಿಂಗ್ ಬೆಲ್ ಒತ್ತಿ ಬಾಗಿಲು ಬಡಿದಿದ್ದಾರೆ.
ಮನೆಯೊಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಮನೆ ಹಿಂಬಾಗಿಲ ಮೂಲಕ ಸಂಬಂಧಿಕರು ಒಳಗೆ ಹೋಗಿ ನೋಡಿದಾಗ ರಕ್ತದ ಮಡುವಿನಲ್ಲಿ ನಾಲ್ಕು ಮಂದಿ ಬಿದ್ದಿರುವುದು ಕಂಡು ಬಂದಿದೆ. ಅಷ್ಟೊತ್ತಿಗಾಗಲೇ ತಾಯಿ-ಮಗಳ ಪ್ರಾಣಪಕ್ಷಿ ಹಾರಿಹೋಗಿತ್ತು.
ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ ಸಂಬಂಧಿಕರು, ತೀವ್ರ ರಕ್ತಸ್ರಾವವಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮೋಹನ್ಗೌಡ ಹಾಗೂ ಮಾಯಾಂಕ್ನನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾಂತ್ ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…