ದಾವಣಗೆರೆ: ಕೆಲ ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಕಿತ್ತೂರು ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಮೃತಪಟ್ಟಿರುವ ಘಟನೆ ನಡೆದ ಬೆನ್ನಲ್ಲೇ ರಾಜ್ಯದ ಮತ್ತೊಂದು ಕಿರು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾವಣಗೆರೆಯ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ 4 ಚುಕ್ಕೆ ಜಿಂಕೆಗಳು ಮೃತಪಟ್ಟಿವೆ. ಹೆಮರಾಜಿಕ್ ಸೆಪ್ಪಿಸೆಮಿಯಾ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಜಿಂಕೆಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃಗಾಲಯದ ಉಳಿದ ಪ್ರಾಣಿಗಳ ಸುರಕ್ಷತೆಯ ದೃಷ್ಟಿಯಿಂದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಮೃಗಾಲಯಕ್ಕೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.
ಜನವರಿ.16ರಂದು ಮೃಗಾಲಯದಲ್ಲಿ ಒಂದು ಚುಕ್ಕೆ ಜಿಂಕೆ ಸಾವನ್ನಪ್ಪಿತ್ತು. ಈ ಬಗ್ಗೆ ಪರಿಶೀಲನೆ ನಡೆಸುತ್ತಿರುವಾಗಲೇ ಮರುದಿನ ಮತ್ತೆರಡು ಜಿಂಕೆಗಳು ಸಾವನ್ನಪ್ಪಿವೆ. ಈಗ ಇನ್ನೊಂದು ಜಿಂಕೆ ಸಾವನ್ನಪ್ಪಿದ್ದು, ಒಟ್ಟು ನಾಲ್ಕು ಜಿಂಕೆಗಳು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ.
ಇನ್ನು ಜಿಂಕೆಗಳ ಸಾವಿನ ಬಗ್ಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಸೋಂಕು ವ್ಯಾಪಿಸದಂತೆ ಕಟ್ಟೆಚ್ಚರ ವಹಿಸಲಾಗಿದೆ. ವೈದ್ಯರು ಇತರೆ ಪ್ರಾಣಿಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…