ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲಿನಲ್ಲಿ ಬಂಧಿಯಾಗಿದ್ದ ಚಿತ್ರದುರ್ಗದ ಮುರುಘಾಶ್ರೀ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸೋಮವಾರ ಬಿಡುಗಡೆಯಾಗಿದ್ದಾರೆ.
ಮುರುಘಾಶ್ರೀ ಹಲವು ತಿಂಗಳುಗಳಿಂದ ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದು, ಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ಕಾರಾಗೃಹದಿಂದ ಬಂಧನ ಮುಕ್ತಗೊಳಿಸಿದೆ.
ಜೈಲಿನಿಂದ ಹೊರಬಂದ ಬಳಿಕ ಸುದ್ದಿಗಾರರೊಂದಿಗೆ ಪ್ರಥಮ ಬಾರಿಗೆ ಮಾತನಾಡಿದ ಮುರುಘೇಶ್ರೀ, ಬಸವೇಶ್ವರನ ಆರ್ಶೀವಾದದಿಂದ ನಾನು ಇಂದು ಬಂಧನದಿಂದ ಬಿಡುಗಡೆಯಾಗಿದ್ದೇನೆ. ಈ ಸಮಯದಲ್ಲಿ ಅಧಿಕವಾಗಿ ಮಾತನಾಡುವುದಕ್ಕಿಂತ ಮೌನವಾಗಿರುವುದು ಉತ್ತಮ ಎನ್ನಿಸುತ್ತದೆ. ನನಗೆ ಸಿಕ್ಕಿರುವ ಜಯವೂ ಸತ್ಯದ ಜಯವಾಗಿದೆ. ಸ್ವಾಮೀಜಿಗಳಿಗೆ ಸಹನೆ ಎಂಬುದು ಬಹಳ ಮುಖ್ಯವಾಗುತ್ತದೆ. ಹೀಗಾಗಿ ನಾನು ಸಹನೆ ಮತ್ತು ತಾಳ್ಮೆಯಿಂದ ಕಾದಿರುವುದಕ್ಕಾಗಿ ಜಯ ಸಿಗುವ ನಿರೀಕ್ಷೆ ಇತ್ತು ಎಂದರು.
ನಾನು ಜೈಲು ಸೇರಿದ ನಂತರ ಐದು ಪುಸ್ತಕಗಳನ್ನು ಬರೆದಿರುವೆ ಹಾಗೂ ನಾಲ್ಕು ಪುಸ್ತಕಗಳನ್ನು ಓದಿರುವೆ. ಸಮಯ ಬಂದಾಗ ಐದು ಪುಸ್ತಕಗಳನ್ನು ಒಮ್ಮೆ ಬಿಡುಗಡೆ ಮಾಡಲಾಗುತ್ತದೆ. ಹೆಚ್ಚು ಮಾತನಾಡಲು ಇದು ಸಕಾಲ ಸಮಯವಲ್ಲ ಎಂದು ಹೇಳಿ ಕಾರಿನಲ್ಲಿ ದಾವಣಗೆರೆಯ ಕಡೆಗೆ ತೆರಳಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…