ರಾಜ್ಯ

ವಂಚನೆ ಪ್ರಕರಣ | ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ನಾಗೇಂದ್ರಗೆ ಸಿಬಿಐ ನೋಟಿಸ್‌

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟೀಸ್ ನೀಡಿದೆ.

ಕಳೆದ ಜ.1 ರಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಾಗೇಂದ್ರ ಅವರ ಆಪ್ತ ವಿಶ್ವನಾಥ ಅವರ ಬಳ್ಳಾರಿಯಲ್ಲಿರುವ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಕೆಲ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಇದರ ಬೆನ್ನಲ್ಲೇ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬಿ.ನಾಗೇಂದ್ರ ಅವರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸಿಬಿಐ ನೋಟೀಸ್ ಕೊಟ್ಟಿದ್ದು, ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.ಈ ಹಿಂದೆ ಜಾರಿ ನಿರ್ದೇಶನಾಲಯ(ಇ ಡಿ)ದಿಂದ ಬಂಧನಕ್ಕೊಳಪಟ್ಟಿದ್ದ ನಾಗೇಂದ್ರ ಕೊನೆಗೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.

ಪ್ರಕರಣವನ್ನು ಈ ಹಿಂದೆ ಎಸ್ಐಟಿ ತನಿಖೆ ನಡೆಸಿತ್ತು. ಆದರೆ ಬಿಜೆಪಿಯ ಶಾಸಕರಾಗಿದ್ದ ರಮೇಶ್ ಜಾರಕಿಹೊಳಿ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ್‍ಬಂಗಾರಪ್ಪ ಹಾಗೂ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‍ಗೆ ರಿಟ್ ಅರ್ಜಿ ಸಲ್ಲಿಸಿ ಸಿಬಿಐ ತನಿಖೆ ನಡೆಸಬೇಕೆಂದು ಕೋರಿದ್ದರು.

ಅಂತಿಮವಾಗಿ ಎರಡೂ ಕಡೆ ವಾದ ಮತ್ತು ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎನ್.ನಾಗಪ್ರಸನ್ನ ಅವರು ಸಿಬಿಐ ತನಿಖೆಗೆ ಆದೇಶ ನೀಡಿದ್ದರು. ಜೊತೆಗೆ ಪ್ರಕರಣ ತನಿಖೆ ನಡೆಸಿದ್ದ ಎಸ್ಐಟಿ ಸಂಗ್ರಹಿಸಿದ್ದ ಎಲ್ಲಾ ದಾಖಲೆಗಳನ್ನೂ ಸಿಬಿಐಗೆ ವಹಿಸಬೇಕೆಂದು ಸೂಚಿಸಿತ್ತು.ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದವರು ಸಲ್ಲಿಸಿದ ಅರ್ಜಿಯನ್ನು ಸಿಬಿಐ ತಿರಸ್ಕರಿಸಿತ್ತು

ಏನಿದು ಪ್ರಕರಣ?
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆಯ ನಂತರ ಈ ಬಹುಕೋಟಿ ಹಗರಣ ಬೆಳಕಿಗೆ ಬಂದಿತ್ತು.ಚಂದ್ರಶೇಖರನ್ ಅವರು ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‍ನೋಟ್‍ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು.

ಈ ಬೆನ್ನಲ್ಲೇ ಬ್ಯಾಂಕ್‍ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ. ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‍ನ 6 ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು.ಬಳಿಕ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಇಡಿ ಅವರನ್ನು ವಶಕ್ಕೆ ಪಡೆದುಕೊಂಡು ಬಂಧನಕ್ಕೆ ಒಳಪಡಿಸಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

29 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

3 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

19 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

20 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

21 hours ago