ಬೆಂಗಳೂರು : ಬಿಜೆಪಿ ಸಂಸದ ಕೆ.ಸುಧಾಕರ್ ಅವರ ಪತ್ನಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ವಂಚಕರು ಲಕ್ಷ ಲಕ್ಷ ಹಣ ದೋಚಿರುವ ಘಟನೆ ನಡೆದಿದೆ.
ಸಂಸದ ಸುಧಾಕರ್ ಪತ್ನಿ ಡಾ.ಪ್ರೀತಿ ಅವರಿಗೆ ಕರೆ ಮಾಡಿರುವ ವಂಚಕರು, ಡಿಜಿಟಲ್ ಅರೆಸ್ಟ್ ಆಗಿದ್ದೀರಿ ಎಂದು ಬೆದರಿಸಿ 14 ಲಕ್ಷ ರೂ ದೋಚಿದ್ದಾರೆ.
ಮುಂಬೈ ಸೈಬರ್ ವಿಭಾಗದಿಂದ ಕರೆ ಮಾಡುತ್ತಿರುವುದಾಗಿ ಹೇಳಿರುವ ವಂಚಕರು ನಿಮ್ಮ ಹೆಸರಿನಲ್ಲಿರುವ ದಾಖಲೆಗಳನ್ನು ಸದ್ದತೆ ಖಾನ್ ಎಂಬಾತ ಬಳಸಿಕೊಂಡು ನಿಮ್ಮ ಹೆಸರಿನಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿ ಅದರಿಂದ ಅಕ್ರಮ ವ್ಯವಹಾರ ನಡೆಸುತ್ತಿದ್ದಾನೆ.
ವಿಯೆಟ್ನಾಂ, ಕಾಂಬೋಡಿಯಾ, ಲಾವೋಸ್ ದೇಶಗಳಿಗೆ ಕಾನೂನು ಬಾಹಿರ ಚಟುವಟಿಕೆ ನಡೆಸಲು ಜನರನ್ನು ಕಳುಹಿಸಿದ್ದಾನೆ. ಪ್ರಕರಣದಲ್ಲಿ ಸದ್ದತ್ ಖಾನ್ನನ್ನು ಅರೆಸ್ಟ್ ಮಾಡಲಾಗಿದೆ. ಆತ ನಿಮ್ಮ ಹೆಸರನ್ನು ಬಾಯ್ಬಿಟ್ಟಿದ್ದಾನೆ. ನಿಮ್ಮ ಹೆಸರಿನಲ್ಲಿರುವ ದಾಖಲೆಗಳನ್ನು ಕೊಟ್ಟಿದ್ದಾನೆ. ಹಾಗಾಗಿ ವಿಚಾರಣೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.
ನಿಮ್ಮ ದಾಖಲೆ, ವೈಯಕ್ತಿಕ ದಾಖಲೆಗಳನ್ನು ರದ್ದು ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ನಿಮ್ಮ ಖಾತೆ ಅಕ್ರಮವಾಗಿದ್ದು, ಪರಿಶೀಲನೆ ನಡೆಸಬೇಕು ಹಣ ಹಾಕುವಂತೆ 14 ಲಕ್ಷ ಹಣ ವರ್ಗಾಯಿಸಿಕೊಂಡಿದ್ದಾರೆ.
ವಂಚಕರು ಕೇಳಿದ ಖಾತೆಗೆ ಪ್ರೀತಿಯವರು ಹಣ ವರ್ಗಾಯಿಸಿದ್ದಾರೆ. ಕೆಲ ಸಮಯದಲ್ಲಿ ತನಗೆ ವಂಚನೆ ಆಗಿದೆ ಎಂದು ಗೊತ್ತಾಗಿದೆ. ತಕ್ಷಣ ವೆಸ್ಟ್ ಸೆನ್ ಠಾಣೆಗೆ ದೂರು ನೀಡಿದ್ದಾರೆ. ಪ್ರೀತಿ ಸುಧಾಕರ್ ಹಾಕಿರುವ ಖಾತೆಯ ಅಕೌಂಟ್ ಫ್ರೀಜ್ ಮಾಡಲಾಗಿದೆ.
ಖಾತೆಯಿಂದ 14 ಲಕ್ಷ ಹಣವನ್ನು ಪ್ರೀತಿಯವರಿಗೆ ಮರಳಿಸಲಾಗಿದೆ. ಸದ್ಯ ಸೈಬರ್ ವಂಚಕರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…