ರಾಜ್ಯ

ಮಾಜಿ ಶಾಸಕರಿಗೆ ಡಿಜಿಟಲ್‌ ಅರೆಸ್ಟ್ ಹೆಸರಿನಲ್ಲಿ ವಂಚನೆ: 30 ಲಕ್ಷ ಕಳೆದುಕೊಂಡ ಗುಂಡಪ್ಪ ವಕೀಲ್‌

ಬೆಂಗಳೂರು: ಮನಿ ಲ್ಯಾಂಡರಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದೀರೆಂದು ಬೆದರಿಸಿ ಮಾಜಿ ಶಾಸಕರೊಬ್ಬರಿಗೆ ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 30 ಲಕ್ಷ ರೂ.ಗಳನ್ನು ಸುಲಿಗೆ ಮಾಡಿರುವ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಔರಾದ್‍ನ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರಿಗೆ ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡಿ ಹಂತಹಂತವಾಗಿ 30 ಲಕ್ಷ ರೂ. ಹಣವನ್ನು ಖದೀಮರು ವರ್ಗಾಯಿಸಿಕೊಂಡು ವಂಚಿಸಿರುವುದು ಬೆಳಕಿಗೆ ಬಂದಿದೆ.‌

ಗುಂಡಪ್ಪ ಅವರ ಮೊಬೈಲ್‍ಗೆ ಆ.12ರಂದು ಸಂಜೆ 6 ಗಂಟೆ ಸುಮಾರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ತಾನು ಸಿಬಿಐ ಆಫೀಸರ್ ಎಂದು ಪರಿಚಯಿಸಿಕೊಂಡಿದ್ದಾನೆ.

ನೀವು ನರೇಶ್ ಗೋಯಲ್ ಅವರ ಮನಿ ಲ್ಯಾಂಡರಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಹಾಗೂ ನಿಮ್ಮ ಎಟಿಎಂ ಕಾರ್ಡ್‍ಗಳು ಸಿಕ್ಕಿದ್ದು, ಸಾಕಷ್ಟು ಹಣದ ವ್ಯವಹಾರ ನಡೆದಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿ ಸೈಬರ್ ವಂಚಕ ಹೆದರಿಸಿದ್ದಾನೆ.

ತದನಂತರದಲ್ಲಿ ಗುಂಡಪ್ಪ ಅವರಿಗೆ ಕರೆ ಮಾಡಿದ ವ್ಯಕ್ತಿ ತಾನು ಪ್ರಕರಣದ ತನಿಖಾಧಿಕಾರಿ ಡಿಸಿಪಿ ನೀರಜ್‍ಕುಮಾರ್ ಎಂದು ಪರಿಚಯಿಸಿಕೊಂಡಿದ್ದು, ನೀವು ಡಿಜಿಟಲ್ ಅರೆಸ್ಟ್ ಆಗಿರುವುದಾಗಿ ಹೇಳಿ ಮೊಬೈಲ್ ಸ್ಥಗಿತಗೊಳಿಸಬೇಡಿ ಎಂದು ಹೇಳಿದ್ದಾಗ ಗುಂಡಪ್ಪ ಅವರು ಗಾಬರಿಗೊಂಡಿದ್ದಾರೆ.

ಆ.13 ರಂದು ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ಆನ್‍ಲೈನ್‍ನಲ್ಲಿ ಜಡ್ಜ್ ಮುಂದೆ ಹಾಜರುಪಡಿಸುತ್ತಿರುವುದಾಗಿ ಹೇಳಿದ ವಂಚಕರು ನೀವು ತಪ್ಪಿತಸ್ಥನಲ್ಲ ಎಂಬುದಕ್ಕಾಗಿ ಮುಚ್ಚಳಿಕೆ ಬರೆಸಿಕೊಂಡು ಆರ್‌ಟಿಜಿಎಸ್ ಮೂಲಕ 10.99 ಲಕ್ಷ ರೂ. ಹಣವನ್ನು ವಂಚಕರು ವರ್ಗಾವಣೆ ಮಾಡಿಸಿಕೊಂಡಿದ್ದಾರೆ.‌

ತದನಂತರದಲ್ಲಿ ನೀರಜ್‍ಕುಮಾರ್ ಹಾಗೂ ಸಂದೀಪ್‍ಕುಮಾರ್ ಪ್ರತಿನಿತ್ಯ ಗುಂಡಪ್ಪನವರನ್ನು ಮೊಬೈಲ್‍ನಲ್ಲಿ ಸಂಪರ್ಕಿಸಿ ತನಿಖೆಗೆ ಸಹಕರಿಸುವಂತೆ ಹಾಗೂ ತಮ್ಮ ಕುಟುಂಬದ ಬ್ಯಾಂಕ್ ಹಾಗೂ ಇತರೆ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.

ನಿಮ್ಮನ್ನು ಆನ್‍ಲೈನ್ ಮುಖಾಂತರ ಜಡ್ಜ್ ಮುಂದೆ ಹಾಜರುಪಡಿಸಿ ಇಡಿ, ಸಿಬಿಐಗಳಿಂದ ನಿಮ್ಮ ಪ್ರಾಪರ್ಟಿ ತನಿಖೆ ನಡೆಸಲು 20 ಲಕ್ಷ ರೂ. ಡೆಪಾಸಿಟ್ ಮಾಡಲು ತಿಳಿಸಿದ್ದು, ಆ ಹಣವನ್ನು ತನಿಖೆ ಮುಗಿದ ನಂತರ ಹಿಂದಿರುಗಿಸುವುದಾಗಿ ನಂಬಿಸಿದ್ದಾರೆ.

ಹೀಗೆ ಸತತವಾಗಿ ತಮ್ಮನ್ನು ಸಂಪರ್ಕಿಸುತ್ತಾ ಡಿಜಿಟಲ್ ಬಂಧನದಲ್ಲಿರಿಸಿ ಹಣದ ವ್ಯವಹಾರ ಮಾಡುತ್ತಿರುವುದರ ಬಗ್ಗೆ ಅನುಮಾನಗೊಂಡು ಗುಂಡಪ್ಪ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಂಚಕರ ಜಾಲದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

19 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

20 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

20 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

23 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

2 days ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

2 days ago