ಬೆಂಗಳೂರು: ರಾಜ್ಯದ ಶಕ್ತಿ ಯೋಜನೆಗಳನನು ಡಯಾಲಿಸಿಸ್ ಒಳಗಾಗಿರುವ ಗಂಡಸರಿಗೂ ವಿಸ್ತರಿಸುವಂತೆ ಕೂಗು ಕೇಳಿ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸ್ಫೀಕರ್ ಯು.ಟಿ.ಖಾದರ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ಮಹಿಳೆಯರಿಗೆ ಮಾತ್ರ ಸೀಮಿತವಾಗಿದ್ದ ಶಕ್ತಿ ಯೋಜನೆ, ಗಂಡಸರಿಗೂ ವಿಸ್ತರಿಸುವಂತೆ ಬೇಡಿಕೆ ಪದೇ ಪದೇ ಬರುತ್ತಿದೆ. ಅದರಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಖುದ್ದು ಯು.ಟಿ.ಖಾದರ್ ಅವರೇ ಪತ್ರ ಬರೆದು ಸಾಧ್ಯತೆ ಬಗ್ಗೆ ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ನಿತ್ಯ ಪುರುಷರು ಸಾರಿಗೆ ಬಸ್ ಬಳಕೆ ಮಾಡುತ್ತಾರೆ. ಇದರಲ್ಲಿ ಅನೇಕ ಕಾಯಿಲೆ ಇರುವ ಪುರುಷ ಪ್ರಯಾಣಿಕರು ಕೂಡ ಸಂಚಾರ ಮಾಡುತ್ತಾರೆ. ಈ ಪೈಕಿ ಡಯಾಲಿಸಿಸ್ಗೆ ಒಳಗಾಗಿರುವ ಪುರುಷ ಪ್ರಯಾಣಿಕರನ್ನು ಶಕ್ತಿ ಯೋಜನೆಗೆ ತರುವಂತೆ ಮನವಿ ಮಾಡಲಾಗಿದೆ.
ವಾರಕ್ಕೆ 2-3 ಬಾರಿ ಡಯಾಲಿಸಿಸ್ಗೆ ಪುರುಷ ರೋಗಿಗಳು ಸಂಚಾರ ಮಾಡುವುದರಿಂದ ಹೆಚ್ಚು ಹಣ ಖರ್ಚಾಗುತ್ತದೆ. ಹೀಗಾಗಿ ಅಂತಹವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಶಕ್ತಿ ಯೋಜನೆ ವ್ಯಾಪ್ತಿಗೆ ತರಬೇಕೆಂದು ಒತ್ತಾಯ ಕೇಳಿಬಂದಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…