ರಾಜ್ಯ

ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಉಚಿತ ಬಸ್‌ : ಮಹತ್ವದ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ.

ಎಲ್‍ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ಸರ್ಕಾರ ತೀರ್ಮಾನಿಸಿದೆ. ಇದು ಸರ್ಕಾರಿ ಶಾಲೆಗಳಲ್ಲಿ ಓದುವ ಬಡ ಮಕ್ಕಳಿಗೆ ದೊಡ್ಡ ಸಹಾಯವಾಗಲಿದೆ. ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ವಿದ್ಯಾಭ್ಯಾಸ ಮಾಡುವ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರ್ಕಾರದ ಈ ಕ್ರಮ ಮಹತ್ವದ್ದಾಗಿದೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದ ದಿಟ್ಟ ಹೆಜ್ಜೆಯೂ ಇದಾಗಿದೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅದಕ್ಕಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್ ವ್ಯವಸ್ಥೆಯನ್ನ ಸರ್ಕಾರ ನೀಡಲಿದೆ ಎಂದಿದ್ದಾರೆ.

ಮಹಿಳೆಯರಿಗೆ ಉಚಿತ ಪ್ರಯಾಣ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಯೋಜನೆಯಡಿ, ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್ ಹೊಂದಿರುವ ಕರ್ನಾಟಕದ ಮಹಿಳೆಯರು ಇದೀಗ ಉಚಿತ ಪ್ರಯಾಣದ ಮಾಡುತ್ತಿದ್ದಾರೆ.

ಪ್ರತಿನಿತ್ಯ ಲಕ್ಷಾಂತರ ಮಹಿಳೆಯುರು ಬಸ್‍ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಈ ಯೋಜನೆಯು ಮಹಿಳೆಯರಿಗೆ ಪ್ರಯಾಣದ ಮೇಲಿನ ವೆಚ್ಚವನ್ನು ಕಡಿಮೆಗೊಳಿಸಿದೆ. ಉಚಿತ ಪ್ರಯಾಣದಿಂದ ಸಾರಿಗೆ ಸಂಸ್ಥೆಗಳಿಗೆ ಆಗುತ್ತಿರುವ ವೆಚ್ಚವನ್ನು ಸರ್ಕಾರವೇ ಭರಿಸುತ್ತಿದೆ. ಹೀಗಾಗಿ ಈ ಯೋಜನೆಯಿಂದ ಸಾರಿಗೆ ಸಂಸ್ಥೆಗೆ ಯಾವುದೇ ಹೊರೆ ಆಗುತ್ತಿಲ್ಲ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

32 mins ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

1 hour ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

2 hours ago

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…

2 hours ago

ಉಪಚುನಾವಣೆ : ಎರಡು ಕ್ಷೇತ್ರಗಳಲ್ಲೂ ನಾವೇ ಗೆಲ್ತೇವೆ : ಸಿಎಂ

ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…

3 hours ago

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್‌

ಕೋಲ್ಕತ್ತಾ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್‌ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ,…

3 hours ago