ರಾಜ್ಯ

ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಉಚಿತ ಬಸ್‌ : ಮಹತ್ವದ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ.

ಎಲ್‍ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ಸರ್ಕಾರ ತೀರ್ಮಾನಿಸಿದೆ. ಇದು ಸರ್ಕಾರಿ ಶಾಲೆಗಳಲ್ಲಿ ಓದುವ ಬಡ ಮಕ್ಕಳಿಗೆ ದೊಡ್ಡ ಸಹಾಯವಾಗಲಿದೆ. ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ವಿದ್ಯಾಭ್ಯಾಸ ಮಾಡುವ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರ್ಕಾರದ ಈ ಕ್ರಮ ಮಹತ್ವದ್ದಾಗಿದೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದ ದಿಟ್ಟ ಹೆಜ್ಜೆಯೂ ಇದಾಗಿದೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅದಕ್ಕಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್ ವ್ಯವಸ್ಥೆಯನ್ನ ಸರ್ಕಾರ ನೀಡಲಿದೆ ಎಂದಿದ್ದಾರೆ.

ಮಹಿಳೆಯರಿಗೆ ಉಚಿತ ಪ್ರಯಾಣ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಯೋಜನೆಯಡಿ, ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್ ಹೊಂದಿರುವ ಕರ್ನಾಟಕದ ಮಹಿಳೆಯರು ಇದೀಗ ಉಚಿತ ಪ್ರಯಾಣದ ಮಾಡುತ್ತಿದ್ದಾರೆ.

ಪ್ರತಿನಿತ್ಯ ಲಕ್ಷಾಂತರ ಮಹಿಳೆಯುರು ಬಸ್‍ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಈ ಯೋಜನೆಯು ಮಹಿಳೆಯರಿಗೆ ಪ್ರಯಾಣದ ಮೇಲಿನ ವೆಚ್ಚವನ್ನು ಕಡಿಮೆಗೊಳಿಸಿದೆ. ಉಚಿತ ಪ್ರಯಾಣದಿಂದ ಸಾರಿಗೆ ಸಂಸ್ಥೆಗಳಿಗೆ ಆಗುತ್ತಿರುವ ವೆಚ್ಚವನ್ನು ಸರ್ಕಾರವೇ ಭರಿಸುತ್ತಿದೆ. ಹೀಗಾಗಿ ಈ ಯೋಜನೆಯಿಂದ ಸಾರಿಗೆ ಸಂಸ್ಥೆಗೆ ಯಾವುದೇ ಹೊರೆ ಆಗುತ್ತಿಲ್ಲ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

7 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

7 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

8 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

8 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

8 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

8 hours ago