ಮಡಿಕೇರಿ : ರಾಜ್ಯದ ಕಾಫಿ ಬೆಳೆಗಾರರ ಮಹತ್ವದ ಬೇಡಿಕೆಯಲ್ಲಿ ಒಂದು ಉಚಿತ ವಿದ್ಯುತ್ ನೀಡೋದಾಗಿದೆ. ಇದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮತಿಸಿದ್ದು, ಪರಿಶೀಲಿಸಿ, ಶೀಘ್ರವೇ ಆದೇಶ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊಡಗಿನ ಕಾಫಿ ಬೆಳೆಗಾರರಿಗೆ 10 ಹೆಚ್.ಪಿ ಉಚಿತ ವಿದ್ಯುತ್ ನೀಡುವ ಬಗ್ಗೆ 2008 ರಿಂದಲೂ ಬೇಡಿಕೆ ಇರುವ ಬಗ್ಗೆ ಮಾತನಾಡಿ ಬೇಡಿಕೆ ಇದೆ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಬಿಜೆಪಿ ಶಾಸಕರೇ ಇಲ್ಲಿದ್ದರೂ ಬೊಪ್ಪಯ್ಯ, ಅಪ್ಪಚ್ಚು ರಂಜನ್ ಅವರು ಈ ಬಗ್ಗೆ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ಸಂಸದರೂ ಅವರೇ ಇದ್ದಾರೆ. ಈ ಬಗ್ಗೆ ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದರು.
ಸಚಿವ ಕೆ.ಎನ್ ರಾಜಣ್ಣ ಅವರು ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಬಗ್ಗೆ ನಾವು ಗುಲಾಮರೇ ನಮ್ಮನ್ನು ಕೇಳದೇ ವರಿಷ್ಠರು ನಿರ್ಧಾರ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಎಲ್ಲರೂ ಒಂದೊಂದು ಹೆಸರನ್ನು ಹೇಳಿದಾದ ಕಷ್ಟವಾಗುತ್ತದೆ.
ಸಾಮಾನ್ಯವಾಗಿ ಈ ಬಗ್ಗೆ ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…