ತುಮಕೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಾವಗಡದ ವಿ.ಎನ್.ನರಸ ರೆಡ್ಡಿ ಅವರಿಂದು ನಿಧನರಾಗಿದ್ದಾರೆ. ಅವರಿಗೆ 103 ವರ್ಷಗಳಾಗಿತ್ತು.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ರೆಡ್ಡಿ ಅವರು ಬ್ರಿಟೀಷರ ಆಳ್ವಿಕೆಯ ದಾಖಲೆಗಳನ್ನು ನಾಶಪಡಿಸಲು ಇಲಿಗಳ ಬಾಲಕ್ಕೆ ಬಟ್ಟೆ ಸುತ್ತಿ, ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಪಾವಗಡ ತಾಲ್ಲೂಕು ಕಛೇರಿಗೆ ಬಿಟ್ಟು ದಾಖಲೆಗಳನ್ನು ಸುಟ್ಟು ಹಾಕಿದ್ದರು.
ಇದನ್ನು ಓದಿ: ಬಾಲಿವುಡ್ ಹಿರಿಯ ನಟ ಸತೀಶ್ ಶಾ ನಿಧನ
ಜೊತೆಗೆ ಬ್ರಿಟೀಷರ ಖಜಾನೆ ಲೂಟಿ ಮಾಡಲು ಸಂಚನ್ನು ಕೂಡ ರೂಪಿಸಿದ್ದರು. ಇದರಿಂದಾಗಿ ರಾತ್ರಿ ಮಲಗಿದ್ದ ವೇಳೆ ಪೊಲೀಸರು ವಿ.ಎನ್.ನರಸರೆಡ್ಡಿ ಸೇರಿದಂತೆ ಏಳು ಜನರನ್ನು ಬಂಧಿಸಿ ತುಮಕೂರು ಜೈಲಿಗೆ ಹಾಕಿದ್ದರು.
ರೆಡ್ಡಿ ಅವರಿಗೆ ಇಬ್ಬರು ಪುತ್ರರು, ನಾಲ್ವರು ಪುತ್ರಿಯರಿದ್ದಾರೆ. ಮೃತರ ಸ್ವಗ್ರಾಮ ವೆಂಕಟಪುರ ಗ್ರಾಮದ ಸಮೀಪದ ತೋಟದಲ್ಲಿ ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…