ರಾಜ್ಯ

ಬ್ರಿಟೀಷರ ದಾಖಲೆಗಳನ್ನೇ ಸುಟ್ಟು ಹಾಕಿದ್ದ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್.ರೆಡ್ಡಿ ನಿಧನ

ತುಮಕೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಾವಗಡದ ವಿ.ಎನ್.ನರಸ ರೆಡ್ಡಿ ಅವರಿಂದು ನಿಧನರಾಗಿದ್ದಾರೆ. ಅವರಿಗೆ 103 ವರ್ಷಗಳಾಗಿತ್ತು.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ರೆಡ್ಡಿ ಅವರು ಬ್ರಿಟೀಷರ ಆಳ್ವಿಕೆಯ ದಾಖಲೆಗಳನ್ನು ನಾಶಪಡಿಸಲು ಇಲಿಗಳ ಬಾಲಕ್ಕೆ ಬಟ್ಟೆ ಸುತ್ತಿ, ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಪಾವಗಡ ತಾಲ್ಲೂಕು ಕಛೇರಿಗೆ ಬಿಟ್ಟು ದಾಖಲೆಗಳನ್ನು ಸುಟ್ಟು ಹಾಕಿದ್ದರು.

ಇದನ್ನು ಓದಿ: ಬಾಲಿವುಡ್‌ ಹಿರಿಯ ನಟ ಸತೀಶ್‌ ಶಾ ನಿಧನ 

ಜೊತೆಗೆ ಬ್ರಿಟೀಷರ ಖಜಾನೆ ಲೂಟಿ ಮಾಡಲು ಸಂಚನ್ನು ಕೂಡ ರೂಪಿಸಿದ್ದರು. ಇದರಿಂದಾಗಿ ರಾತ್ರಿ ಮಲಗಿದ್ದ ವೇಳೆ ಪೊಲೀಸರು ವಿ.ಎನ್.ನರಸರೆಡ್ಡಿ ಸೇರಿದಂತೆ ಏಳು ಜನರನ್ನು ಬಂಧಿಸಿ ತುಮಕೂರು ಜೈಲಿಗೆ ಹಾಕಿದ್ದರು.

ರೆಡ್ಡಿ ಅವರಿಗೆ ಇಬ್ಬರು ಪುತ್ರರು, ನಾಲ್ವರು ಪುತ್ರಿಯರಿದ್ದಾರೆ. ಮೃತರ ಸ್ವಗ್ರಾಮ ವೆಂಕಟಪುರ ಗ್ರಾಮದ ಸಮೀಪದ ತೋಟದಲ್ಲಿ ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ.

ಆಂದೋಲನ ಡೆಸ್ಕ್

Recent Posts

ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ: ಸಂಕಷ್ಟದಲ್ಲಿ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌…

11 mins ago

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

1 hour ago

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

5 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

5 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

5 hours ago