ರಾಜ್ಯ

ಸ್ವತಂತ್ರ್ಯ ಹೋರಾಟಗಾರರ ಗೌರವಧನ 4.85 ಕೋಟಿ ರೂ. ಬಾಕಿ

ಮಂಡ್ಯ : ರಾಜ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಗೌರವಧನ ಮತ್ತು ಕುಟುಂಬ ಮಾಸಿಕ ಪಡೆಯುತ್ತಿರುವ ಫಲಾನುಭವಿಗಳಿಗೆ ೪.೮೫ ಕೋಟಿ ರೂ. ಮಾಸಿಕ ಸಂಭಾವನೆ ಪಾವತಿಸುವುದು ಬಾಕಿ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಈ ಕುರಿತು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರು ವಿಧಾನ ಪರಿಷತ್ತಿನಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರು ಮತ್ತು ಕುಟುಂಬ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳಿಗೆ ಮಾಸಿಕ ೧೦ ಸಾವಿರ ರೂ. ಗೌರವ ಸಂಭಾವನೆ ಪಾವತಿಸಲಾಗುತ್ತಿದೆ. ಚಾಮರಾಜನಗರ, ಹಾಸನ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪಾವತಿಸಬೇಕಾದ ಮಾಸಿಕ ಸಂಭಾವನೆ ಬಾಕಿ ಇಲ್ಲ ಎಂದು ತಿಳಿಸಿದ್ದಾರೆ.

ಯಾವ ಜಿಲ್ಲೆ, ಎಷ್ಟು ಬಾಕಿ?

ಬೆಂಗಳೂರು (ನಗರ) – ೫೯.೦೨ ಲಕ್ಷ ರೂ.,
ಮಂಡ್ಯ -೧೯.೭೦ ಲಕ್ಷ ರೂ.,
ಮೈಸೂರು – ೧೨ ಲಕ್ಷ ರೂ.,
ಬೆಂಗಳೂರು (ಗ್ರಾ) ೩.೪ ಲಕ್ಷ ರೂ.,
ರಾಮನಗರ ೯೦ ಸಾವಿರ ರೂ.,
ಕೊಡಗು – ೮೦ ಸಾವಿರ ರೂ.

ಜೀವಂತ ಇರುವ ಸ್ವಾತಂತ್ರ್ಯ ಹೋರಾಟಗಾರರ ಸಂಖ್ಯೆ ೧೫೦
ಬೆಂಗಳೂರು (ಗ್ರಾ), ಚಾಮರಾಜನಗರ, ಉಡುಪಿ, ಕೊಡಗು ಸೇರಿದಂತೆ ಒಟ್ಟು ೧೦ ಜಿಲ್ಲೆಗಳಲ್ಲಿ ಜೀವಂತವಿರುವ ಸ್ವಾತಂತ್ರ್ಯ ಹೋರಾಟಗಾರರು ಯಾರೂ ಇಲ್ಲ. ಆದರೆ, ಪ್ರಸ್ತುತ ವಿವಿಧ ಜಿಲ್ಲೆಗಳಲ್ಲಿ ಜೀವಂತವಿರುವ, ರಾಜ್ಯ ಸ್ವಾತಂತ್ರ್ಯ ಹೋರಾಟಗಾರರ ಗೌರವಧನ ಪಡೆಯುತ್ತಿರುವ ಫಲಾನುಭವಿಗಳ ಒಟ್ಟು ಸಂಖ್ಯೆ ೧೫೦ ಇದೆ ಎಂದು ಸಚಿವರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

14 mins ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

23 mins ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

45 mins ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

56 mins ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

2 hours ago

ಮಡಿಕೇರಿ | ಕಾರಿನ ಮೇಲೆ ಉರುಳಿ ಬಿದ್ದ ಪ್ರವಾಸಿಗರ ಬಸ್

ಮಡಿಕೇರಿ : ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ…

2 hours ago