Freedom fighters
ಮಂಡ್ಯ : ರಾಜ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಗೌರವಧನ ಮತ್ತು ಕುಟುಂಬ ಮಾಸಿಕ ಪಡೆಯುತ್ತಿರುವ ಫಲಾನುಭವಿಗಳಿಗೆ ೪.೮೫ ಕೋಟಿ ರೂ. ಮಾಸಿಕ ಸಂಭಾವನೆ ಪಾವತಿಸುವುದು ಬಾಕಿ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಈ ಕುರಿತು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರು ವಿಧಾನ ಪರಿಷತ್ತಿನಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರು ಮತ್ತು ಕುಟುಂಬ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳಿಗೆ ಮಾಸಿಕ ೧೦ ಸಾವಿರ ರೂ. ಗೌರವ ಸಂಭಾವನೆ ಪಾವತಿಸಲಾಗುತ್ತಿದೆ. ಚಾಮರಾಜನಗರ, ಹಾಸನ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪಾವತಿಸಬೇಕಾದ ಮಾಸಿಕ ಸಂಭಾವನೆ ಬಾಕಿ ಇಲ್ಲ ಎಂದು ತಿಳಿಸಿದ್ದಾರೆ.
ಯಾವ ಜಿಲ್ಲೆ, ಎಷ್ಟು ಬಾಕಿ?
ಬೆಂಗಳೂರು (ನಗರ) – ೫೯.೦೨ ಲಕ್ಷ ರೂ.,
ಮಂಡ್ಯ -೧೯.೭೦ ಲಕ್ಷ ರೂ.,
ಮೈಸೂರು – ೧೨ ಲಕ್ಷ ರೂ.,
ಬೆಂಗಳೂರು (ಗ್ರಾ) ೩.೪ ಲಕ್ಷ ರೂ.,
ರಾಮನಗರ ೯೦ ಸಾವಿರ ರೂ.,
ಕೊಡಗು – ೮೦ ಸಾವಿರ ರೂ.
ಜೀವಂತ ಇರುವ ಸ್ವಾತಂತ್ರ್ಯ ಹೋರಾಟಗಾರರ ಸಂಖ್ಯೆ ೧೫೦
ಬೆಂಗಳೂರು (ಗ್ರಾ), ಚಾಮರಾಜನಗರ, ಉಡುಪಿ, ಕೊಡಗು ಸೇರಿದಂತೆ ಒಟ್ಟು ೧೦ ಜಿಲ್ಲೆಗಳಲ್ಲಿ ಜೀವಂತವಿರುವ ಸ್ವಾತಂತ್ರ್ಯ ಹೋರಾಟಗಾರರು ಯಾರೂ ಇಲ್ಲ. ಆದರೆ, ಪ್ರಸ್ತುತ ವಿವಿಧ ಜಿಲ್ಲೆಗಳಲ್ಲಿ ಜೀವಂತವಿರುವ, ರಾಜ್ಯ ಸ್ವಾತಂತ್ರ್ಯ ಹೋರಾಟಗಾರರ ಗೌರವಧನ ಪಡೆಯುತ್ತಿರುವ ಫಲಾನುಭವಿಗಳ ಒಟ್ಟು ಸಂಖ್ಯೆ ೧೫೦ ಇದೆ ಎಂದು ಸಚಿವರು ತಿಳಿಸಿದ್ದಾರೆ.
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…