dinesh gundurao
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಜುಲೈ.1ರಿಂದ ಮೊಬೈಲ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ದೂರಿಗೆ ಹಿತೈಷಿ ಹಾಡಲು ನೂತನ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಸ್ತುತ ಬಳಸಲ್ಪಡುತ್ತಿರುವ ಹಾಜರಾತಿ ನಿರ್ವಹಣಾ ವ್ಯವಸ್ಥೆಯ ಹಾರ್ಡ್ವೇರ್- ಸಾಫ್ಟ್ವೇರ್ಗೂ ಆಧಾರ್ ಆಧಾರಿತ ಬಯೋಮೆಟ್ರಿಕ್ ಪ್ರಮಾಣಿಕರಣವನ್ನು ಅವಲಂಬಿಸಿದೆ.
ಹಾರ್ಡ್ವೇರ್ ಸಾಧನಗಳಿಗೆ ಆಗಾಗ್ಗೆ ದುರಸ್ತಿ ಮತ್ತು ಆವರ್ತಕ ಬದಲಾವಣೆಗಳ ಅಗತ್ಯವಿದೆ. ಇದು ಗಣನೀಯ ವೆಚ್ಚಗಳಿಗೆ ಕಾರಣವಾಗಿತ್ತು. ಬಯೋಮೆಟ್ರಿಕ್ ಸಾಧನಗಳ ಸ್ಥಿರ ಸ್ವರೂಪದಿಂದ ಹಾಜರಾತಿ ಗುರುತಿಸುವಿಕೆಯನ್ನು ನಿರ್ದಿಷ್ಟ ಸ್ಥಳಗಳಿಗೆ ಸೀಮಿತಗೊಳಿಸಿದೆ. ಕ್ಷೇತ್ರ ಸಂಬಂಧ ದೂರ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ಇದು ಸಹಕಾರಿಯಾಗಿರಲಿಲ್ಲ ಎಂದು ತಿಳಿಸಿದರು.
ರಾಜ್ಯದ 12 ಸಾವಿರ ಆರೋಗ್ಯ ಸಂಸ್ಥೆಗಳನ್ನೊಳಗೊಂಡು ಇದನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಆಡಳಿತದ ಚೌಕಟ್ಟಿನಲ್ಲಿ ಮೊಬೈಲ್ ಹಾಜರಾತಿ ವ್ಯವಸ್ಥೆಯಿದ್ದು, ಇನ್ನು ಮುಂದೆ ವೈದ್ಯರ ಕರಾರುವಕ್ಕಾದ ಲಭ್ಯತೆಯನ್ನು ಸರ್ಕಾರ ಖಾತ್ರಿಪಡಿಸಲಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…