ರಾಜ್ಯ

ಜುಲೈ.1ರಿಂದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಮೊಬೈಲ್‌ ಹಾಜರಾತಿ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಜುಲೈ.1ರಿಂದ ಮೊಬೈಲ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ದೂರಿಗೆ ಹಿತೈಷಿ ಹಾಡಲು ನೂತನ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಸ್ತುತ ಬಳಸಲ್ಪಡುತ್ತಿರುವ ಹಾಜರಾತಿ ನಿರ್ವಹಣಾ ವ್ಯವಸ್ಥೆಯ ಹಾರ್ಡ್‌ವೇರ್- ಸಾಫ್ಟ್‌ವೇರ್‌ಗೂ ಆಧಾರ್ ಆಧಾರಿತ ಬಯೋಮೆಟ್ರಿಕ್ ಪ್ರಮಾಣಿಕರಣವನ್ನು ಅವಲಂಬಿಸಿದೆ.

ಹಾರ್ಡ್‌ವೇರ್ ಸಾಧನಗಳಿಗೆ ಆಗಾಗ್ಗೆ ದುರಸ್ತಿ ಮತ್ತು ಆವರ್ತಕ ಬದಲಾವಣೆಗಳ ಅಗತ್ಯವಿದೆ. ಇದು ಗಣನೀಯ ವೆಚ್ಚಗಳಿಗೆ ಕಾರಣವಾಗಿತ್ತು. ಬಯೋಮೆಟ್ರಿಕ್ ಸಾಧನಗಳ ಸ್ಥಿರ ಸ್ವರೂಪದಿಂದ ಹಾಜರಾತಿ ಗುರುತಿಸುವಿಕೆಯನ್ನು ನಿರ್ದಿಷ್ಟ ಸ್ಥಳಗಳಿಗೆ ಸೀಮಿತಗೊಳಿಸಿದೆ. ಕ್ಷೇತ್ರ ಸಂಬಂಧ ದೂರ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ಇದು ಸಹಕಾರಿಯಾಗಿರಲಿಲ್ಲ ಎಂದು ತಿಳಿಸಿದರು.

ರಾಜ್ಯದ 12 ಸಾವಿರ ಆರೋಗ್ಯ ಸಂಸ್ಥೆಗಳನ್ನೊಳಗೊಂಡು ಇದನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಆಡಳಿತದ ಚೌಕಟ್ಟಿನಲ್ಲಿ ಮೊಬೈಲ್ ಹಾಜರಾತಿ ವ್ಯವಸ್ಥೆಯಿದ್ದು, ಇನ್ನು ಮುಂದೆ ವೈದ್ಯರ ಕರಾರುವಕ್ಕಾದ ಲಭ್ಯತೆಯನ್ನು ಸರ್ಕಾರ ಖಾತ್ರಿಪಡಿಸಲಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

4 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

7 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

7 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

8 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

11 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

11 hours ago