ಚಿಕ್ಕಮಗಳೂರು : ನವೆಂಬರ್ 4 ರಿಂದ 6 ವರೆಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ದತ್ತಮಾಲಾ ಅಭಿಯಾನ ಹಿನ್ನೆಲೆ ಪ್ರವಾಸಿಗರಿಗೆ ಮೂರು ದಿನ ಗಿರಿ ಭಾಗ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಈ ಸಮಯದಲ್ಲಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುವ ಆಲೋಚನೆಯಲ್ಲಿದ್ದರೆ ದಿನಾಂಕವನ್ನು ಬದಲಾಯಿಸಿಕೊಳ್ಳಿ ಎಂದು ಜಿಲ್ಲಾಡಳಿತ ಹೇಳಿದೆ.
ದತ್ತಮಾಲಾ ಅಭಿಯಾನ ನಡೆಯುವ ಸಮಯದಲ್ಲಿ ಹೆಚ್ಚಿನ ಭಕ್ತರು ಇಲ್ಲಿಗೆ ಭೇಟಿ ನೀಡುವ ಉದ್ದೇಶದಿಂದ ಪ್ರವಾಸಿಗರಿಗೆ ಅನಾನುಕೂಲವಾಗುವ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಹಾಗಾಗಿ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಬರುವ ಪ್ರವಾಸಿಗರಿಗೆ ನವೆಂಬರ್ 4 ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ನಿಷೇಧ ಹೇರಲಾಗಿದೆ.
ಅ. 30 ರಿಂದ ನವೆಂಬರ್ 5ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದ್ದು ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತದಿಂದ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಈ ನಿಟ್ಟಿನಲ್ಲಿ ದತ್ತಪೀಠಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…