ರಾಜ್ಯ

ನ.4 ರಿಂದ 6ರವರೆಗೆ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಭಂಧ

ಚಿಕ್ಕಮಗಳೂರು : ನವೆಂಬರ್ 4 ರಿಂದ 6 ವರೆಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ದತ್ತಮಾಲಾ ಅಭಿಯಾನ ಹಿನ್ನೆಲೆ ಪ್ರವಾಸಿಗರಿಗೆ ಮೂರು ದಿನ ಗಿರಿ ಭಾಗ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಈ ಸಮಯದಲ್ಲಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುವ ಆಲೋಚನೆಯಲ್ಲಿದ್ದರೆ ದಿನಾಂಕವನ್ನು ಬದಲಾಯಿಸಿಕೊಳ್ಳಿ ಎಂದು ಜಿಲ್ಲಾಡಳಿತ ಹೇಳಿದೆ.

ದತ್ತಮಾಲಾ ಅಭಿಯಾನ ನಡೆಯುವ ಸಮಯದಲ್ಲಿ ಹೆಚ್ಚಿನ ಭಕ್ತರು ಇಲ್ಲಿಗೆ ಭೇಟಿ ನೀಡುವ ಉದ್ದೇಶದಿಂದ ಪ್ರವಾಸಿಗರಿಗೆ ಅನಾನುಕೂಲವಾಗುವ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಹಾಗಾಗಿ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಬರುವ ಪ್ರವಾಸಿಗರಿಗೆ ನವೆಂಬರ್ 4 ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ನಿಷೇಧ ಹೇರಲಾಗಿದೆ.

ಅ. 30 ರಿಂದ ನವೆಂಬರ್ 5ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದ್ದು ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತದಿಂದ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಈ ನಿಟ್ಟಿನಲ್ಲಿ ದತ್ತಪೀಠಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

lokesh

Recent Posts

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

38 mins ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

5 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

5 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

5 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

5 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

5 hours ago