ರಾಜ್ಯ

ಸೆಪ್ಟೆಂಬರ್.‌22ರಿಂದ ನಂದಿನಿ ಕೆಲ ಉತ್ಪನ್ನಗಳ ದರ ಇಳಿಕೆ

ಬೆಂಗಳೂರು: ಕೇಂದ್ರ ಸರ್ಕಾರವು ಸರಕು ಸೇವಾ ತೆರಿಗೆ ಪರಿಷ್ಕರಣೆ ಮಾಡಿ ದೇಶದ ಜನತೆಗೆ ಬೆಲೆ ಏರಿಕೆ ಬಿಸಿ ತಗ್ಗಿಸಿದ ಬೆನ್ನಲ್ಲೇ ಸೋಮವಾರದಿಂದಲೇ (ಸೆ.22) ಅನ್ವಯವಾಗುವಂತೆ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ.

ಕೇಂದ್ರ ಸರ್ಕಾರದ ಸೂಚನೆಯಂತೆ ಕೆಎಂಎಫ್‌ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ ಸಾಧ್ಯತೆಯಿದೆ. ದರ ಇಳಿಕೆ ಸಂಬಂಧ ಕೆಎಂಎಫ್‌ನ ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ಕೂಡ ನಡೆಸಲಿದೆ. ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌‍ಟಿಯನ್ನ ಶೇ.12ರಿಂದ 5ಕ್ಕೆ ಇಳಿಕೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ನಂದಿನಿಯ ವಿವಿಧ ಉತ್ಪನ್ನಗಳ ದರ ಇಳಿಕೆಯಾಗಲಿದೆ ಎನ್ನಲಾಗಿದೆ.

ಬೆಣ್ಣೆ, ತುಪ್ಪ, ಚೀಸ್‌‍ ಮೇಲೆ ಮೊದಲು 12%ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ.
ಪನ್ನಿರ್‌ ಮತ್ತು ಯುಹೆಚ್‌ಟಿ ಹಾಲಿಗೆ(ಗುಡ್‌ ಲೈಫ್‌) ಮೊದಲು 5% ರಷ್ಟು ಜಿಎಸ್‌‍ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ. ಹೀಗಾಗಿ ಈ ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ.

ಮೊಸರು ದರ ಇಳಿಕೆ ಸಾಧ್ಯತೆ: ಮೊಸರಿನ ದರ ಲೀಟರ್‌ಗೆ 4 ರೂಪಾಯಿ ವರೆಗೆ ಕಡಿಮೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಧಿಕಾರಿಗಳ ಜೊತೆ ಸಭೆ ಬಳಿಕ ನಿರ್ಧಾರ ತೆಗೆದುಕೊಳ್ಳಲಿದ್ದು, ಸೋಮವಾರದಿಂದಲೇ ಪರಿಷ್ಕೃತ ದರ ಜಾರಿಗೊಳಿಸುವಂತೆ ಮಾರಾಟಗಾರರಿಗೆ ಸೂಚನೆ ನೀಡುವ ಸಾಧ್ಯತೆ ಇದೆ.
2017ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಜಿಎಸ್‌‍ಟಿ ಜಾರಿಗೊಳಿಸಲಾಗಿತ್ತು. ಇದಾದ ಬಳಿಕ 2022ರಲ್ಲಿ ಜಿಎಸ್‌‍ಟಿಯನ್ನು ಶೇ 12ಕ್ಕೆ ಹೆಚ್ಚಿಸಲಾಗಿತ್ತು. ಈಗ ತೆರಿಗೆ ದರ ಕಡಿಮೆ ಮಾಡಿರುವುದರಿಂದ ಗ್ರಾಹಕರಿಗೆ ಸ್ವಲ್ಪ ಮಟ್ಟಿಗೆ ಹೊರೆ ಕಡಿಮೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

2 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

5 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

6 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

8 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

11 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

11 hours ago