ರಾಜ್ಯ

ಸೆಪ್ಟೆಂಬರ್.‌22ರಿಂದ ನಂದಿನಿ ಕೆಲ ಉತ್ಪನ್ನಗಳ ದರ ಇಳಿಕೆ

ಬೆಂಗಳೂರು: ಕೇಂದ್ರ ಸರ್ಕಾರವು ಸರಕು ಸೇವಾ ತೆರಿಗೆ ಪರಿಷ್ಕರಣೆ ಮಾಡಿ ದೇಶದ ಜನತೆಗೆ ಬೆಲೆ ಏರಿಕೆ ಬಿಸಿ ತಗ್ಗಿಸಿದ ಬೆನ್ನಲ್ಲೇ ಸೋಮವಾರದಿಂದಲೇ (ಸೆ.22) ಅನ್ವಯವಾಗುವಂತೆ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ.

ಕೇಂದ್ರ ಸರ್ಕಾರದ ಸೂಚನೆಯಂತೆ ಕೆಎಂಎಫ್‌ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ ಸಾಧ್ಯತೆಯಿದೆ. ದರ ಇಳಿಕೆ ಸಂಬಂಧ ಕೆಎಂಎಫ್‌ನ ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ಕೂಡ ನಡೆಸಲಿದೆ. ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌‍ಟಿಯನ್ನ ಶೇ.12ರಿಂದ 5ಕ್ಕೆ ಇಳಿಕೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ನಂದಿನಿಯ ವಿವಿಧ ಉತ್ಪನ್ನಗಳ ದರ ಇಳಿಕೆಯಾಗಲಿದೆ ಎನ್ನಲಾಗಿದೆ.

ಬೆಣ್ಣೆ, ತುಪ್ಪ, ಚೀಸ್‌‍ ಮೇಲೆ ಮೊದಲು 12%ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ.
ಪನ್ನಿರ್‌ ಮತ್ತು ಯುಹೆಚ್‌ಟಿ ಹಾಲಿಗೆ(ಗುಡ್‌ ಲೈಫ್‌) ಮೊದಲು 5% ರಷ್ಟು ಜಿಎಸ್‌‍ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ. ಹೀಗಾಗಿ ಈ ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ.

ಮೊಸರು ದರ ಇಳಿಕೆ ಸಾಧ್ಯತೆ: ಮೊಸರಿನ ದರ ಲೀಟರ್‌ಗೆ 4 ರೂಪಾಯಿ ವರೆಗೆ ಕಡಿಮೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಧಿಕಾರಿಗಳ ಜೊತೆ ಸಭೆ ಬಳಿಕ ನಿರ್ಧಾರ ತೆಗೆದುಕೊಳ್ಳಲಿದ್ದು, ಸೋಮವಾರದಿಂದಲೇ ಪರಿಷ್ಕೃತ ದರ ಜಾರಿಗೊಳಿಸುವಂತೆ ಮಾರಾಟಗಾರರಿಗೆ ಸೂಚನೆ ನೀಡುವ ಸಾಧ್ಯತೆ ಇದೆ.
2017ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಜಿಎಸ್‌‍ಟಿ ಜಾರಿಗೊಳಿಸಲಾಗಿತ್ತು. ಇದಾದ ಬಳಿಕ 2022ರಲ್ಲಿ ಜಿಎಸ್‌‍ಟಿಯನ್ನು ಶೇ 12ಕ್ಕೆ ಹೆಚ್ಚಿಸಲಾಗಿತ್ತು. ಈಗ ತೆರಿಗೆ ದರ ಕಡಿಮೆ ಮಾಡಿರುವುದರಿಂದ ಗ್ರಾಹಕರಿಗೆ ಸ್ವಲ್ಪ ಮಟ್ಟಿಗೆ ಹೊರೆ ಕಡಿಮೆಯಾಗಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

9 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

10 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

10 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

10 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

10 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

10 hours ago