ಕರ್ನಾಟಕದಲ್ಲಿನ ಅಂಗಡಿ, ಮುಂಗಟ್ಟುಗಳಲ್ಲಿ ಕನ್ನಡ ಭಾಷೆ ಬಳಕೆ ಹೆಚ್ಚಿರಬೇಕು ಎಂಬ ಕೂಗು ಆಗಿಂದಾಗ್ಗೆ ಕೇಳಿಬರುತ್ತಲೇ ಇದ್ದು, ಇತ್ತೀಚೆಗಷ್ಟೇ ಈ ವಿಚಾರವಾಗಿ ಪ್ರತಿಭಟನೆಗಳು ನಡೆದಿವೆ ಹಾಗೂ ರಾಜ್ಯ ಸರ್ಕಾರ ಅಂಗಡಿ ಮುಂದಿನ ಬೋರ್ಡ್ಗಳಲ್ಲಿ 60% ಕನ್ನಡ ಕಡ್ಡಾಯ ಎಂಬ ನಿಯಮವನ್ನೂ ಸಹ ಜಾರಿಗೆ ತಂದಿದೆ.
ಈ ಮಹತ್ವದ ತೀರ್ಮಾನ ಕನ್ನಡಿಗರಲ್ಲಿ ಖುಷಿ ತಂದಿದ್ದು, ಇದೀಗ ರಾಜ್ಯದಲ್ಲಿನ ಪೆಟ್ರೋಲ್ ಬಂಕ್ ಗಳಲ್ಲಿ ಇಂಧನದ ದರ ಪ್ರದರ್ಶನ ಕನ್ನಡದಲ್ಲಿಯೂ ಸಹ ಇರಲಿದೆ ಎಂದು ಕೇಂದ್ರ ಪೆಟ್ರೊಲಿಯಂ ಸಚಿವ ಹರ್ದೀಪ್ ಸಿಂಗ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರ್ದೀಪ್ ಸಿಂಗ್ ಇಂಧನ ಬೆಲೆಗಳ ಪ್ರದರ್ಶನ ಹಿಂದಿ ಹಾಗೂ ಇಂಗ್ಲಿಷ್ನಲ್ಲಿ ಮಾತ್ರ ಇದ್ದು ಕನ್ನಡದಲ್ಲೂ ಬೇಕು ಎಂಬ ಮನವಿ ಇತ್ತು. ಅದರಂತೆ ಇಂದಿನಿಂದ ( ಜನವರಿ 10 ) ಕನ್ನಡದಲ್ಲಿ ಪೆಟ್ರೋಲ್ ದರಗಳ ಪ್ರದರ್ಶನವಾಗಲಿದೆ ಎಂದು ತಿಳಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…