ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ ಎಲೆಕ್ಟ್ರಿಕ್ ವಾಹನ (ಇವಿ) ಕ್ಷೇತ್ರದಲ್ಲಿ ಭಾರೀ ಚೇತರಿಕೆ ಕಂಡುಬಂದಿದೆ. ದಾಖಲೆ ಪ್ರಮಾಣದಲ್ಲಿ ಇವಿ ವಾಹನಗಳ ಮಾರಾಟವಾಗಿದ್ದು, ಮಾರುಕಟ್ಟೆ ಹೊಸ ಮೈಲಿಗಲ್ಲು ತಲುಪಿದೆ.
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಭಾರತಕ್ಕೆ ಪೂರೈಕೆಯಾಗುವ ಇಂಧನದಲ್ಲಿ ವ್ಯತ್ಯಯ ಉಂಟಾಗಿದೆ. ಎಲ್ಪಿಜಿ ಕೊರತೆ ಎದುರಾಗಿದ್ದು, ಪ್ರಿಮಿಯಂ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಸಾಮಾನ್ಯ ಪೆಟ್ರೋಲ್-ಡೀಸೆಲ್ ದರಗಳು ಮತ್ತಷ್ಟು ಏರಿಕೆಯಾಗುವ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ಜನರು ಇವಿ ವಾಹನಗಳತ್ತ ಮುಖ ಮಾಡುತ್ತಿದ್ದಾರೆ.
ಜನವರಿ-ಫೆಬ್ರವರಿ ತಿಂಗಳೊಂದಿಗೆ ಹೋಲಿಸಿದರೆ, ಮಾರ್ಚ್ ತಿಂಗಳ ಅಂತ್ಯಕ್ಕೆ ಇವಿ ಬೈಕ್, ಆಟೋ ಹಾಗೂ ಕಾರುಗಳ ಮಾರಾಟದಲ್ಲಿ ಶೇಕಡಾ 30ರಷ್ಟು ಏರಿಕೆ ಕಂಡುಬಂದಿದೆ. ಯುದ್ಧ ಮುಂದುವರೆದರೆ ಇಂಧನ ಕೊರತೆ ಮತ್ತಷ್ಟು ಹೆಚ್ಚಾಗಬಹುದು ಎಂಬ ಭಯದಿಂದ ಜನರು ಮುಂಚಿತವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುತ್ತಿದ್ದಾರೆ ಎಂದು ಶೋರೂಂ ಸಿಬ್ಬಂದಿ ಹೇಳುತ್ತಿದ್ದಾರೆ.
ಇದಲ್ಲದೆ ಏಪ್ರಿಲ್ನಿಂದ ಜಾರಿಗೆ ಬಂದಿರುವ ಹೊಸ ರಸ್ತೆ ತೆರಿಗೆ ನೀತಿಯ ಪರಿಣಾಮವೂ ಮಾರ್ಚ್ ತಿಂಗಳಲ್ಲಿ ಎಲೆಕ್ಟ್ರಿಕಲ್ ವಾಹನಗಳ ಖರೀದಿಗೆ ಉತ್ತೇಜನ ನೀಡಿದೆ. ತೆರಿಗೆ ಏರಿಕೆಗೆ ಮುನ್ನವೇ ಹೆಚ್ಚಿನ ಜನರು ವಾಹನ ಖರೀದಿಗೆ ಮುಂದಾಗಿದ್ದಾರು.
ಪ್ರಮುಖವಾಗಿ, ಒಂದೇ ದಿನದಲ್ಲಿ ಸುಮಾರು 13 ಸಾವಿರ ಎಲೆಕ್ಟ್ರಿಕ್ ವಾಹನಗಳ ನೋಂದಣಿ ನಡೆದಿದ್ದು, ಇದರಲ್ಲಿ ದ್ವಿಚಕ್ರ ವಾಹನಗಳೇ ಹೆಚ್ಚಿನ ಪ್ರಮಾಣದಲ್ಲಿವೆ. ಯುದ್ಧದ ಪರಿಣಾಮ ಹಾಗೂ ಹೊಸ ರಸ್ತೆ ತೆರಿಗೆ ನೀತಿಯ ಪ್ರಭಾವದಿಂದ ಮಾರ್ಚ್ ತಿಂಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ದಾಖಲೆ ಮಟ್ಟ ತಲುಪಿದ್ದು, ಶೋರೂಂಗಳು ಮತ್ತು ಇವಿ ಕಂಪನಿಗಳಲ್ಲಿ ಖುಷಿ ಮೂಡಿಸಿದೆ.
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…
ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…
ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ ಮಡಿಕೇರಿ: ಅಶ್ಲೀಲ…