ರಾಜ್ಯ

ವೈದ್ಯಕೀಯ ವಲಯದ ಹೂಡಿಕೆಗೆ ಸಂಪೂರ್ಣ ಸಹಕಾರ: ಸಚಿವ ಎಂಬಿ ಪಾಟೀಲ್‌

ಬೆಂಗಳೂರು: ಲೇಸರ್‌ ಔಷಧ ಮತ್ತು ಶಸ್ತ್ರ ಚಿಕಿತ್ಸೆಯ ಪ್ರಗತಿಗೆ ರಾಜ್ಯವು ಪ್ರಮುಖ ವೇದಿಕೆಯಾಗಿದೆ. ಉದ್ಯಮಿಗಳು ವೈದ್ಯಕೀಯ ವಲಯದ ಹೂಡಿಕೆಗೆ ಮುಂದೆ ಬಂದರೆ ಅವರಿಗೆ ಸರ್ಕಾರವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ನಗರದ ಹೊರವಲಯದ ವೈಟ್‌ಫೀಲ್ಡ್‌ನಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ಲೇಸರ್‌ ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸಾ ಸಮಾವೇಶವನ್ನು ಸಚಿವ ಎಂ.ಬಿ.ಪಾಟೀಲ್‌ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ರಾಜ್ಯವು ವೈದ್ಯಕೀಯ ಅವಿಷ್ಕಾರದಲ್ಲಿ ಮುಂಚೂಣಿಯಲ್ಲಿದೆ. 350ಕ್ಕೂ ಹೆಚ್ಚು ಅಗತ್ಯ ವೈದ್ಯಕೀಯ ಸಾಧನಗಳನ್ನು ತಯಾರಿಸುತ್ತಿದೆ. ನೂರಾರು ಔಷಧ ಕಂಪನಿಗಳಿಗೆ ಅತಿಥ್ಯವಹಿಸುತ್ತಿದೆ. ʼಕ್ವೀನ್‌ ಸಿಟಿʼ ಯೋಜನೆ ಸೇರಿದಂತೆ ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ವೈದ್ಯಕೀಯ ಚಿಕಿತ್ಸಾ ವಲಯಗಳಲ್ಲಿ ಉದ್ಯಮಿಗಳು ಹೂಡಿಕೆಗೆ ಮುಂದೆ ಬಂದರೆ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದರು.

ದೇಶದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸಾಧನಗಳ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇ.25 ರಷ್ಟಿದೆ. ಜೊತೆಗೆ ದೇಶದ ಜೈವಿಕ ತಂತ್ರಜ್ಞಾನ ಸಂಸ್ಥೆಗಳು ಶೇ.60 ರಷ್ಟು ನಮ್ಮಲ್ಲೇ ಇದೆ. ದೇಶದ ಔಷಧ ರಫ್ತು ವಹಿವಾಟಿನಲ್ಲಿ ನಮ್ಮ ಪಾಲು ಶೇ.40 ರಷ್ಟಿದೆ ಎಂದು ವಿವರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಡಾ.ಅರುಣ್‌ ಇನಾಂದಾರ್‌, ಡಾ.ಬಿ.ಎಸ್‌.ಚಂದ್ರಶೇಖರ್‌, ಸೊಲ್ಲಾಪುರದ ಸ್ವಪ್ನಿಲ್‌ ಶಾ, ಹೈದರಾಬಾದ್‌ನ ಸಂಜೀವ್‌ ಸೇರಿದಂತೆ ಇತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

12 mins ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

17 mins ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

49 mins ago

ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…

1 hour ago

ತಾಪಮಾನ ಏರಿಕೆ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 hour ago

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

6 hours ago