ರಾಜ್ಯ

ವೈದ್ಯಕೀಯ ವಲಯದ ಹೂಡಿಕೆಗೆ ಸಂಪೂರ್ಣ ಸಹಕಾರ: ಸಚಿವ ಎಂಬಿ ಪಾಟೀಲ್‌

ಬೆಂಗಳೂರು: ಲೇಸರ್‌ ಔಷಧ ಮತ್ತು ಶಸ್ತ್ರ ಚಿಕಿತ್ಸೆಯ ಪ್ರಗತಿಗೆ ರಾಜ್ಯವು ಪ್ರಮುಖ ವೇದಿಕೆಯಾಗಿದೆ. ಉದ್ಯಮಿಗಳು ವೈದ್ಯಕೀಯ ವಲಯದ ಹೂಡಿಕೆಗೆ ಮುಂದೆ ಬಂದರೆ ಅವರಿಗೆ ಸರ್ಕಾರವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ನಗರದ ಹೊರವಲಯದ ವೈಟ್‌ಫೀಲ್ಡ್‌ನಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ಲೇಸರ್‌ ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸಾ ಸಮಾವೇಶವನ್ನು ಸಚಿವ ಎಂ.ಬಿ.ಪಾಟೀಲ್‌ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ರಾಜ್ಯವು ವೈದ್ಯಕೀಯ ಅವಿಷ್ಕಾರದಲ್ಲಿ ಮುಂಚೂಣಿಯಲ್ಲಿದೆ. 350ಕ್ಕೂ ಹೆಚ್ಚು ಅಗತ್ಯ ವೈದ್ಯಕೀಯ ಸಾಧನಗಳನ್ನು ತಯಾರಿಸುತ್ತಿದೆ. ನೂರಾರು ಔಷಧ ಕಂಪನಿಗಳಿಗೆ ಅತಿಥ್ಯವಹಿಸುತ್ತಿದೆ. ʼಕ್ವೀನ್‌ ಸಿಟಿʼ ಯೋಜನೆ ಸೇರಿದಂತೆ ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ವೈದ್ಯಕೀಯ ಚಿಕಿತ್ಸಾ ವಲಯಗಳಲ್ಲಿ ಉದ್ಯಮಿಗಳು ಹೂಡಿಕೆಗೆ ಮುಂದೆ ಬಂದರೆ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದರು.

ದೇಶದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸಾಧನಗಳ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇ.25 ರಷ್ಟಿದೆ. ಜೊತೆಗೆ ದೇಶದ ಜೈವಿಕ ತಂತ್ರಜ್ಞಾನ ಸಂಸ್ಥೆಗಳು ಶೇ.60 ರಷ್ಟು ನಮ್ಮಲ್ಲೇ ಇದೆ. ದೇಶದ ಔಷಧ ರಫ್ತು ವಹಿವಾಟಿನಲ್ಲಿ ನಮ್ಮ ಪಾಲು ಶೇ.40 ರಷ್ಟಿದೆ ಎಂದು ವಿವರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಡಾ.ಅರುಣ್‌ ಇನಾಂದಾರ್‌, ಡಾ.ಬಿ.ಎಸ್‌.ಚಂದ್ರಶೇಖರ್‌, ಸೊಲ್ಲಾಪುರದ ಸ್ವಪ್ನಿಲ್‌ ಶಾ, ಹೈದರಾಬಾದ್‌ನ ಸಂಜೀವ್‌ ಸೇರಿದಂತೆ ಇತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

2 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

7 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

7 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

7 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

7 hours ago