ಬೆಂಗಳೂರು: ಲೇಸರ್ ಔಷಧ ಮತ್ತು ಶಸ್ತ್ರ ಚಿಕಿತ್ಸೆಯ ಪ್ರಗತಿಗೆ ರಾಜ್ಯವು ಪ್ರಮುಖ ವೇದಿಕೆಯಾಗಿದೆ. ಉದ್ಯಮಿಗಳು ವೈದ್ಯಕೀಯ ವಲಯದ ಹೂಡಿಕೆಗೆ ಮುಂದೆ ಬಂದರೆ ಅವರಿಗೆ ಸರ್ಕಾರವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ನಗರದ ಹೊರವಲಯದ ವೈಟ್ಫೀಲ್ಡ್ನಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ಲೇಸರ್ ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸಾ ಸಮಾವೇಶವನ್ನು ಸಚಿವ ಎಂ.ಬಿ.ಪಾಟೀಲ್ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ರಾಜ್ಯವು ವೈದ್ಯಕೀಯ ಅವಿಷ್ಕಾರದಲ್ಲಿ ಮುಂಚೂಣಿಯಲ್ಲಿದೆ. 350ಕ್ಕೂ ಹೆಚ್ಚು ಅಗತ್ಯ ವೈದ್ಯಕೀಯ ಸಾಧನಗಳನ್ನು ತಯಾರಿಸುತ್ತಿದೆ. ನೂರಾರು ಔಷಧ ಕಂಪನಿಗಳಿಗೆ ಅತಿಥ್ಯವಹಿಸುತ್ತಿದೆ. ʼಕ್ವೀನ್ ಸಿಟಿʼ ಯೋಜನೆ ಸೇರಿದಂತೆ ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ವೈದ್ಯಕೀಯ ಚಿಕಿತ್ಸಾ ವಲಯಗಳಲ್ಲಿ ಉದ್ಯಮಿಗಳು ಹೂಡಿಕೆಗೆ ಮುಂದೆ ಬಂದರೆ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದರು.
ದೇಶದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸಾಧನಗಳ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇ.25 ರಷ್ಟಿದೆ. ಜೊತೆಗೆ ದೇಶದ ಜೈವಿಕ ತಂತ್ರಜ್ಞಾನ ಸಂಸ್ಥೆಗಳು ಶೇ.60 ರಷ್ಟು ನಮ್ಮಲ್ಲೇ ಇದೆ. ದೇಶದ ಔಷಧ ರಫ್ತು ವಹಿವಾಟಿನಲ್ಲಿ ನಮ್ಮ ಪಾಲು ಶೇ.40 ರಷ್ಟಿದೆ ಎಂದು ವಿವರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಡಾ.ಅರುಣ್ ಇನಾಂದಾರ್, ಡಾ.ಬಿ.ಎಸ್.ಚಂದ್ರಶೇಖರ್, ಸೊಲ್ಲಾಪುರದ ಸ್ವಪ್ನಿಲ್ ಶಾ, ಹೈದರಾಬಾದ್ನ ಸಂಜೀವ್ ಸೇರಿದಂತೆ ಇತರರು ಇದ್ದರು.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…