ಧಾರವಾಡ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಸಂತೋಷ್ ಲಾಡ್ ದರ ಹೆಚ್ಚಳವನ್ನು ಸಮರ್ಥಿಸಿಕೊಂಡಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಈಗ ಹಾಲಿನ ದರವೂ ಕೂಡ ದುಬಾರಿಯಾಗಿದೆ. ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಈಗಾಗಲೇ ಇಂಧನ ಬೆಲೆ ಏರಿಕೆಯಿಂದ ಜನ ಶಾಕ್ ಆಗಿದ್ದಾರೆ. ಇದರ ಜೊತೆಗೆ ಈಗ ಹಾಲಿನ ದರ ಹೆಚ್ಚಳ ಮಾಡಲಾಗಿದ್ದು, ಜನರು ಹೇಗೆ ಜೀವನ ನಡೆಸುತ್ತಾರೆ ಎಂದು ಬಿಜೆಪಿಗರು ಕಿಡಿಕಾರಿದ್ದಾರೆ.
ಹಾಲಿನ ದರ ಏರಿಕೆ ಬಗ್ಗೆ ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್ ಅವರು, ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಬಿಜೆಪಿಯವರು ಸುಖಾ ಸುಮ್ಮನೆ ಎಲ್ಲದಕ್ಕೂ ಟೀಕೆ ಮಾಡುತ್ತಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ತಂದು ಜನತೆಗೆ ಅನುಕೂಲ ಮಾಡಿಕೊಟ್ಟಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬೆಲೆ ತುಂಬಾ ಕಡಿಮೆಯಿದೆ. ರಾಜ್ಯದ ಅಭಿವೃದ್ಧಿಗೋಸ್ಕರ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…
ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…