ರಾಜ್ಯ

ಕೇಂದ್ರದ ಯೋಜನೆಗಳಿಗೆ ಕೇಂದ್ರದಿಂದ ಬಾರದ ಹಣ: ಸಭೆಯಲ್ಲಿ ಸಿಎಂ ಅಸಮಾಧಾನ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಶೇ ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ ನೀವು ಎಂದರು.

ಕೇಂದ್ರ ಸರ್ಕಾರಕ್ಕೆ, ಕೇಂದ್ರದ ಮಂತ್ರಿಗಳಿಗೆ ಮತ್ತು ಪ್ರಧಾನ ಮಂತ್ರಿಯವರಿಗೆ ರಾಜ್ಯ ಸರ್ಕಾರದಿಂದ ಮೇಲಿಂದ ಮೇಲೆ ಬರೆದ ಪತ್ರಗಳ ಮಾಹಿತಿ ನೀಡಿದ ಸಿಎಂ, ಪತ್ರವನ್ನು ಸಭೆಯಲ್ಲಿ ಓದಿ ಸಂಸದರ ಗಮನ‌ ಸೆಳೆದರು.

15 ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು 11495 ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಏನನ್ನೂ ಕೊಡ್ತಾ ಇಲ್ಲ.

ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ , ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ, ಆದರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾತಾಡ್ತೀರಿ ಎಂದು ಸಿಎಂ ಟೀಕಿಸಿದರು.

ಇದನ್ನೂ ಓದಿ:- ಮೈಸೂರು | ಮಳೆಗಾಲಕ್ಕೆ ಇಲ್ಲದ ಸಿದ್ಧತೆ ; ತಪ್ಪದ ಅವಾಂತರ 

ನಾನೇ ಎರಡು ಬಾರಿ ಭೇಟಿ ನಿರ್ಮಲಾ ಸೀತರಾಮನ್ ಅವರಿಗೆ ಭೇಟಿ ಮಾಡಿ ಮನವಿ ಮಾಡಿದರೂ ಕೊಡಲಿಲ್ಲ. ರಾಜ್ಯದ ಸಂಸದರು ಒಟ್ಟಾಗಿ ಇದನ್ನು ಕೊಡಿಸಲು ಯತ್ನಿಸಬೇಕು. ಇಷ್ಟು ದಿನಗಳೊಳಗೆ ನೀವು ಕೊಡಿಸಬೇಕಿತ್ತು. ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬೇಡಿ ಎಂದು ಸಿಎಂ ತಿಳಿಸಿದರು.

ರಾಜ್ಯ ಸರ್ಕಾರ ನಿರಂತರವಾಗಿ ಒಟ್ಟು 5665 ಕೋಟಿ ಪಿಂಚಣಿ ಕೊಡುತ್ತಲೇ ಬರುತ್ತದೆ. ಆದರೆ, 559 ಕೋಟಿ ಮಾತ್ರ ಕೇಂದ್ರ ಸರ್ಕಾರ ಕೊಡುತ್ತದೆ. ಈ ಸಣ್ಣ ಮೊತ್ತವನ್ನೂ ಕೇಂದ್ರ ಸರ್ಕಾರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ ಕೇಂದ್ರ. ಇದು ಏಕೆ ಎಂದು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಮಿರ್ಜಾಪುರದಲ್ಲಿ ಸರಣಿ ಅಪಘಾತ: 11 ಮಂದಿ ಸಾವು

ಮಿರ್ಜಾಪುರ (ಉತ್ತರ ಪ್ರದೇಶ): ಬಹು ವಾಹನಗಳು ಡಿಕ್ಕಿಯಾಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿರುವ…

13 mins ago

ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯ ಚಿಂತನೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯ ಚಿಂತನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪೆಟ್ರೋಲ್‌ ಮತ್ತು…

27 mins ago

ಮಂಡ್ಯದಲ್ಲಿ ಸಿಇಟಿ ಗದ್ದಲ: ವಿದ್ಯಾರ್ಥಿನಿಯರ ಓಲೆ ಬಿಚ್ಚಿಸಿದ ಪರಿವೀಕ್ಷಕರು

ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ಸಿಇಟಿ ಪರೀಕ್ಷೆ ಹಿನ್ನೆಲೆ ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೊಂಡಿದೆ. ಪರೀಕ್ಷೆಗೆ…

1 hour ago

ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಬೆಂಕಿ: ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲು

ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ…

1 hour ago

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ | ನಾಳೆ ವಿಶೇಷ ಸಂಪುಟ ಸಭೆ

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಕುಟ್ಟ ಖಾಸಗಿ ಹೋಂಸ್ಟೇ ಪರವಾನಗಿ ರದ್ದು

ಪೊನ್ನಂಪೇಟೆ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಖಾಸಗಿ…

2 hours ago