ರಾಜ್ಯ

ಕೇಂದ್ರದ ಯೋಜನೆಗಳಿಗೆ ಕೇಂದ್ರದಿಂದ ಬಾರದ ಹಣ: ಸಭೆಯಲ್ಲಿ ಸಿಎಂ ಅಸಮಾಧಾನ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಶೇ ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ ನೀವು ಎಂದರು.

ಕೇಂದ್ರ ಸರ್ಕಾರಕ್ಕೆ, ಕೇಂದ್ರದ ಮಂತ್ರಿಗಳಿಗೆ ಮತ್ತು ಪ್ರಧಾನ ಮಂತ್ರಿಯವರಿಗೆ ರಾಜ್ಯ ಸರ್ಕಾರದಿಂದ ಮೇಲಿಂದ ಮೇಲೆ ಬರೆದ ಪತ್ರಗಳ ಮಾಹಿತಿ ನೀಡಿದ ಸಿಎಂ, ಪತ್ರವನ್ನು ಸಭೆಯಲ್ಲಿ ಓದಿ ಸಂಸದರ ಗಮನ‌ ಸೆಳೆದರು.

15 ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು 11495 ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಏನನ್ನೂ ಕೊಡ್ತಾ ಇಲ್ಲ.

ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ , ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ, ಆದರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾತಾಡ್ತೀರಿ ಎಂದು ಸಿಎಂ ಟೀಕಿಸಿದರು.

ಇದನ್ನೂ ಓದಿ:- ಮೈಸೂರು | ಮಳೆಗಾಲಕ್ಕೆ ಇಲ್ಲದ ಸಿದ್ಧತೆ ; ತಪ್ಪದ ಅವಾಂತರ 

ನಾನೇ ಎರಡು ಬಾರಿ ಭೇಟಿ ನಿರ್ಮಲಾ ಸೀತರಾಮನ್ ಅವರಿಗೆ ಭೇಟಿ ಮಾಡಿ ಮನವಿ ಮಾಡಿದರೂ ಕೊಡಲಿಲ್ಲ. ರಾಜ್ಯದ ಸಂಸದರು ಒಟ್ಟಾಗಿ ಇದನ್ನು ಕೊಡಿಸಲು ಯತ್ನಿಸಬೇಕು. ಇಷ್ಟು ದಿನಗಳೊಳಗೆ ನೀವು ಕೊಡಿಸಬೇಕಿತ್ತು. ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬೇಡಿ ಎಂದು ಸಿಎಂ ತಿಳಿಸಿದರು.

ರಾಜ್ಯ ಸರ್ಕಾರ ನಿರಂತರವಾಗಿ ಒಟ್ಟು 5665 ಕೋಟಿ ಪಿಂಚಣಿ ಕೊಡುತ್ತಲೇ ಬರುತ್ತದೆ. ಆದರೆ, 559 ಕೋಟಿ ಮಾತ್ರ ಕೇಂದ್ರ ಸರ್ಕಾರ ಕೊಡುತ್ತದೆ. ಈ ಸಣ್ಣ ಮೊತ್ತವನ್ನೂ ಕೇಂದ್ರ ಸರ್ಕಾರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ ಕೇಂದ್ರ. ಇದು ಏಕೆ ಎಂದು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

15 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

15 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

15 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

15 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

15 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

15 hours ago