ರಾಜ್ಯ

ಕನ್ನಡದ ಭವಿಷ್ಯ ಕರಾಳವಾಗಿದೆ: ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ರಾಜ್ಯದಲ್ಲಿ ಕನ್ನಡ ಶಾಲೆಗಳು ಈಗಾಗಲೇ ನಶಿಸಿಹೋಗಿವೆ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯ ಭವಿಷ್ಯ ಕರಾಳವಾಗಲಿದೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪುರೊಷೋತ್ತಮ ಬಿಳಿಮಲೆ ಆತಂಕ ವ್ಯಕ್ತಪಡಿಸಿದ್ದಾರೆ.

ಕ್ರಿಯಾ ಮಾಧ್ಯಮ ಏರ್ಪಡಿಸಿದ್ದ ಮಾತೃ ಭಾಷೆ ಹಾಗೂ ಕೆಂಪು ಪುಸ್ತಕ ದಿನವನ್ನು ಉದ್ದೇಶೀಸಿ ಅವರು ಮಾತನಾಡಿದರು.

ಕನ್ನಡ ಭಾಷೆ ಹಾಗೂ ಅಸ್ಮಿತೆಯ ಮುಂದೆ ಹಲವು ಸವಾಲುಗಳಿವೆ. ಕನ್ನಡ ಶಿಕ್ಷಣದ ಗುಣಮಟ್ಟವನ್ನು ಕಾಪಾಡಿಕೊಳ್ಳದೆ ಹೋದಲ್ಲಿ ಭಾಷೆ ಸಂಸ್ಕೃತಿ ಇಲ್ಲದಂತಾಗುತ್ತದೆ ಎಂದು ಹೇಳಿದರು.

ಸಾಹಿತಿ, ಪತ್ರಕರ್ತ ಜಿ.ಎನ್‌ ಮೋಹನ್‌ ʼಓದುವ ಖುಷಿʼ ಕೃತಿ ಬಿಡುಗಡೆ ಮಾಡಿ ನಂತರ ಮಾತನಾಡಿದ ಅವರು, ಪುಸ್ತಕ ಎನ್ನುವುದು ಮನುಷ್ಯರಲ್ಲಿ ಬದಲಾವಣೆಯನ್ನು ತರುವ ಪ್ರಮುಖ ಅಸ್ತ್ರ. ಸಮಾಜ ಜಡವಾಗಿ ಇರಲು ಬಿಡದ ಬದಲಾವಣೆಯ ವೇಗವರ್ಧಕ, ಪುಸ್ತಕ ಪ್ರೀತಿ ಬಲಪಸಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಮುಖ್ಯಸ್ಥರಾದ ಬಸವರಾಜ ಕಲ್ಕುಡಿ ಅವರು ಮಾತನಾಡಿ, ಆಧುನಿಕ ತಂತ್ರಜ್ಞಾನ ಹಾಗೂ ಸಾಧನಗಳಿಂದಾಗಿ ಯುವ ಪೀಳಿಗೆ ಪುಸ್ತಕ ಓದುವುದರಿಂದ ಸಂಪೂರ್ಣವಾಗಿ ವಿಮುಖರಾಗುತ್ತಿದ್ದಾರೆ. ಓದಿನತ್ತ ಅವರನ್ನು ಸೆಳೆಯುವುದು ಸವಾಲಿನ ಕೆಲಸವಾಗಿದೆ ಎಂದರು.

ಕ್ರಿಯಾ ಮಾಧ್ಯಮದ ಎನ್‌ಕೆ ವಸಂತರಾಜ್‌, ಕೆಎಸ್‌ ವಿಮಲಾ, ಕೃತಿಯ ಅನುವಾದಕರಾದ ತಡಗಳಲೆ ಸುರೇಂದ್ರ ರಾವ್‌ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

6 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

9 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

9 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

9 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

10 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

10 hours ago