ರಾಜ್ಯ

ಕನ್ನಡದ ಭವಿಷ್ಯ ಕರಾಳವಾಗಿದೆ: ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ರಾಜ್ಯದಲ್ಲಿ ಕನ್ನಡ ಶಾಲೆಗಳು ಈಗಾಗಲೇ ನಶಿಸಿಹೋಗಿವೆ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯ ಭವಿಷ್ಯ ಕರಾಳವಾಗಲಿದೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪುರೊಷೋತ್ತಮ ಬಿಳಿಮಲೆ ಆತಂಕ ವ್ಯಕ್ತಪಡಿಸಿದ್ದಾರೆ.

ಕ್ರಿಯಾ ಮಾಧ್ಯಮ ಏರ್ಪಡಿಸಿದ್ದ ಮಾತೃ ಭಾಷೆ ಹಾಗೂ ಕೆಂಪು ಪುಸ್ತಕ ದಿನವನ್ನು ಉದ್ದೇಶೀಸಿ ಅವರು ಮಾತನಾಡಿದರು.

ಕನ್ನಡ ಭಾಷೆ ಹಾಗೂ ಅಸ್ಮಿತೆಯ ಮುಂದೆ ಹಲವು ಸವಾಲುಗಳಿವೆ. ಕನ್ನಡ ಶಿಕ್ಷಣದ ಗುಣಮಟ್ಟವನ್ನು ಕಾಪಾಡಿಕೊಳ್ಳದೆ ಹೋದಲ್ಲಿ ಭಾಷೆ ಸಂಸ್ಕೃತಿ ಇಲ್ಲದಂತಾಗುತ್ತದೆ ಎಂದು ಹೇಳಿದರು.

ಸಾಹಿತಿ, ಪತ್ರಕರ್ತ ಜಿ.ಎನ್‌ ಮೋಹನ್‌ ʼಓದುವ ಖುಷಿʼ ಕೃತಿ ಬಿಡುಗಡೆ ಮಾಡಿ ನಂತರ ಮಾತನಾಡಿದ ಅವರು, ಪುಸ್ತಕ ಎನ್ನುವುದು ಮನುಷ್ಯರಲ್ಲಿ ಬದಲಾವಣೆಯನ್ನು ತರುವ ಪ್ರಮುಖ ಅಸ್ತ್ರ. ಸಮಾಜ ಜಡವಾಗಿ ಇರಲು ಬಿಡದ ಬದಲಾವಣೆಯ ವೇಗವರ್ಧಕ, ಪುಸ್ತಕ ಪ್ರೀತಿ ಬಲಪಸಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಮುಖ್ಯಸ್ಥರಾದ ಬಸವರಾಜ ಕಲ್ಕುಡಿ ಅವರು ಮಾತನಾಡಿ, ಆಧುನಿಕ ತಂತ್ರಜ್ಞಾನ ಹಾಗೂ ಸಾಧನಗಳಿಂದಾಗಿ ಯುವ ಪೀಳಿಗೆ ಪುಸ್ತಕ ಓದುವುದರಿಂದ ಸಂಪೂರ್ಣವಾಗಿ ವಿಮುಖರಾಗುತ್ತಿದ್ದಾರೆ. ಓದಿನತ್ತ ಅವರನ್ನು ಸೆಳೆಯುವುದು ಸವಾಲಿನ ಕೆಲಸವಾಗಿದೆ ಎಂದರು.

ಕ್ರಿಯಾ ಮಾಧ್ಯಮದ ಎನ್‌ಕೆ ವಸಂತರಾಜ್‌, ಕೆಎಸ್‌ ವಿಮಲಾ, ಕೃತಿಯ ಅನುವಾದಕರಾದ ತಡಗಳಲೆ ಸುರೇಂದ್ರ ರಾವ್‌ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago