ಬೆಂಗಳೂರು: ಈ ಹಿಂದೆ ಸಚಿವ ಸತೀಶ್ ಜಾರಕಿಹೊಳಿ ಆಯೋಜಿಸಿದ್ದ ಔತಣಕೂಣದ ಬಗ್ಗೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಬೆನ್ನಲ್ಲೇ ನಾಳೆ ಔತಣಕೂಟ ಏರ್ಪಡಿಸಿದ್ದು, ಈ ಬಗ್ಗೆ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್ ಅವರೇ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಇಂದು(ಜನವರಿ.7) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಏರ್ಪಡಿಸಿದ್ದ ಡಿನ್ನರ್ ಪಾರ್ಟಿಯಲ್ಲೂ ಸಹ ಸಿಎಂ ಸಿದ್ದರಾಮಯ್ಯ ಹೋಗಿ ಊಟ ಮಾಡಿದ್ದರು. ಅದರಂತೆಯೇ ನಾಳೆಯೂ(ಜ.8) ಕೂಡ ಪಕ್ಷದ ಸಚಿವರು, ಶಾಸಕರು ಹಾಗೂ ಮಾಜಿ ಶಾಸಕರು ಮತ್ತು ಸಚಿವರೊಂದಿಗೆ ಡಿನ್ನರ್ ಪಾರ್ಟಿ ಆಯೋಜಿಸಲಾಗಿದೆ. ಹೀಗಾಗಿ ಈ ಪಾರ್ಟಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದ್ದಾರೆ.
ಇನ್ನೂ ಎಸ್ಸಿ, ಎಸ್ಟಿ ಸಮುದಾಯದ ವತಿಯಿಂದ ಸಮಾವೇಶ ನಡೆಸುವ ಉದ್ದೇಶವಿದೆ. ಹಾಗಾಗಿ ನಾಳೆ ಸಂಜೆ ಏಳು ಗಂಟೆಗೆ ಎಸ್ಸಿ ಮತ್ತು ಎಸ್ಟಿ ಸಮಾವೇಶದ ಪೂರ್ವಭಾವಿ ಸಭೆ ಇದೆ. ಈ ಸಭೆ ಮುಗಿದ ನಂತರ ತಮ್ಮ ಮನೆಯಲ್ಲಿ ಡಿನ್ನರ್ ಪಾರ್ಟಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…