ರಾಜ್ಯ

ತಕ್ಷಣದಿಂದಲೇ ಕೋಮು ಹಿಂಸೆ ನಿಗ್ರಹ ಪಡೆ ಜಾರಿ ; ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು : ಮಂಗಳೂರಿನಲ್ಲಿ ಯುವಕನ ಕೊಲೆ ಪ್ರಕರಣದಲ್ಲಿ ಮಹತ್ವದ ಮಾಹಿತಿ ಸಿಕ್ಕಿದ್ದು, ಅದರ ಆಧಾರದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪ್ರತಿಬಾರಿ ಈ ರೀತಿಯ ಘಟನೆಗಳಾದಾಗ ಸುಮ್ಮನಿರಲಾಗುವುದಿಲ್ಲ. ಕೋಮು ಹಿಂಸೆ ನಿಗ್ರಹ ಪಡೆ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿ ವಾತಾವರಣ ಕೆಡಿಸಿದ್ದಾರೆ. ಇವರು ಒಂದು ಕೊಲೆ ಮಾಡಿದರೆ ಅವರು ಇನ್ನೊಂದು ಕೊಲೆ ಮಾಡುವುದನ್ನು ನೋಡಿಕೊಂಡು ಸುಮ್ಮನಿರಲಾಗುವುದಿಲ್ಲ. ಕೋಮು ಹಿಂಸೆ ನಿಗ್ರಹ ಪಡೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಆರಂಭವಾಗಲಿದೆ. ಒಂದು ಕಡೆ ಕಾನೂನು ಜಾರಿ ಮತ್ತೊಂದು ಕಡೆ ಶಾಂತಿ ಪಾಲನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಂಗಳೂರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈ ರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ಕಾನೂನನ್ನು ಮತ್ತಷ್ಟು ಬಿಗಿ ಮಾಡುತ್ತೇವೆ ಎಂದರು.

ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸಿ, ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಕಳೆದ ಬಾರಿ ಘಟನೆ ನಡೆದಾಗ ಪರಿಸ್ಥಿತಿ ಅರ್ಥೈಸಿಕೊಂಡು, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಪರಿಶೀಲನೆ ಮಾಡಿ, ತಕ್ಷಣ ಜಾರಿಗೆ ಬರುವ ನಿಟ್ಟಿನಲ್ಲಿ ನಿನ್ನೆ ಸರ್ಕಾರ ಆದೇಶ ಹೊರಡಿಸಿ, ಕೋಮು ಹಿಂಸೆ ನಿಗ್ರಹ ಪಡೆ ತಕ್ಷಣ ಜಾರಿಗೆ ಬರಲಿದೆ. ಪಡೆಗೆ ಯಾರು ನೇತೃತ್ವ ವಹಿಸಲಿದ್ದಾರೆ, ಯಾವ ರೀತಿ ಕ್ರಮ ಕೈಗೊಳ್ಳಲಿದೆ ಎಂಬ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸುತ್ತೇವೆ. ಕೋಮು ಹಿಂಸೆಯನ್ನು ಹತ್ತಿಕ್ಕಲು, ಸರ್ಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ನಕ್ಸಲ್ ನಿಗ್ರಹ ಕಾರ್ಯಪಡೆಯಲ್ಲಿನ ಅರ್ಧ ಸಿಬ್ಬಂದಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆಗೆ ನಿಯೋಜಿಸಲಾಗುವುದು. ಅವರಿಗೆ ಅಗತ್ಯ ಅಧಿಕಾರ, ಸವಲತ್ತುಗಳನ್ನು ನೀಡುತ್ತೇವೆ. ಮೂರು ಜಿಲ್ಲೆಗಳಲ್ಲಿ ಹೆಚ್ಚು ಗಮನ ಹರಿಸುತ್ತೇವೆ ಎಂದು ಹೇಳಿದರು.

ದ್ವೇಷ ಭಾವನೆ ಬಂದರೆ ಸಮಾಜ ಎಲ್ಲಿ ಉಳಿಯುತ್ತದೆ. ಜನರು ಅಲ್ಲಿ ಜೀವನ ಮಾಡಲು ಆಗುತ್ತದೆಯೇ ? ಇದನ್ನು ಸರ್ಕಾರ ನೋಡಿಕೊಂಡು ಸುಮನೆ ಇರುವುದಿಲ್ಲ ಎಂದರು.

ಮಂಗಳೂರಿನಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ತನಿಖೆಯಲ್ಲಿ ಗಂಭೀರವಾದ ಮಾಹಿತಿ ಸಿಕ್ಕಿದೆ. ಅದರ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಘಟನೆಯಾದಾಗ ನಾಲ್ಕು ಜನರನ್ನು ಬಂಧಿಸಿದ್ದೇವೆ. ಇನ್ನೂ ಮುಂದುವರೆದು ಕೆಲವರ ಹೇಳಿಕೆಗಳಲ್ಲಿ ಮಾಹಿತಿಗಳು ಸಿಕ್ಕಿವೆ ಅದರ ಆಧಾರದ ಮೇಲೂ ಮುಲ್ಲಾಜಿಲ್ಲದೆ ಯಾರನ್ನೂ ಹೊರತು ಪಡಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ಜನಪ್ರತಿನಿಧಿಗಳು ಶಾಂತಿ ನೆಲೆಸುವ ನಿಟ್ಟಿನಲ್ಲಿ ಸಹಕಾರ ಮಾಡಬೇಕು. ಪ್ರಚೋದನೆ ಮಾಡಲು ಹೋದರೆ ನಿಲ್ಲಿಸಲು ಹೇಗೆ ಸಾಧ್ಯ. ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಗಳನ್ನು ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

6 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

7 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

7 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

7 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

7 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

7 hours ago