ರಾಜ್ಯ

ಬಿಟಿಎಂ ಲೇಔಟ್ ಯುವತಿಯ ಮೇಲೆ ದೌರ್ಜನ್ಯ ಪ್ರಕರಣ: ಜಿ.ಪರಮೇಶ್ವರ್‌ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು: ಇಲ್ಲಿನ ಬಿಟಿಎಂ ಲೇಔಟ್ ನಲ್ಲಿನ ಯುವತಿಯ ಮೇಲಿನ ದೌರ್ಜನ್ಯ ಘಟನೆಯ ಕುರಿತಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೇಜವಾಬ್ದಾರಿ ಹೇಳಿಕೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿರುವುದನ್ನು ಸ್ವತಃ ಒಪ್ಪಿಕೊಂಡಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿನ ಯುವತಿಯ ಮೇಲಿನ ದೌರ್ಜನ್ಯ ಘಟನೆಯ ಕುರಿತಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಬೇಜವಾಬ್ದಾರಿ ಹೇಳಿಕೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿರುವುದನ್ನು ಸ್ವತಃ ಒಪ್ಪಿಕೊಂಡಂತಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ದಿನದಿಂದಲೂ ಕೊಲೆ, ಸುಲಿಗೆ, ದರೋಡೆ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಅತ್ಯಾಚಾರಗಳು ಸರಣಿ ರೂಪದಲ್ಲಿ ವರದಿಯಾಗುತ್ತಲೇ ಇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಸರ್ಕಾರದಲ್ಲಿ ಇಂತಹ ಘಟನೆಗಳು ನಡೆಯುವುದರಲ್ಲಿ ವಿಶೇಷತೆ ಏನು ಇಲ್ಲ, ಅದನ್ನು ಗಂಭೀರವಾಗಿ ಪರಿಗಣಿಸುವ ಅನಿವಾರ್ಯತೆಯಿಲ್ಲ ಎನ್ನುವ ರೀತಿಯಲ್ಲಿ  ರಾಜ್ಯದಲ್ಲಿ ಕಾನೂನು ವ್ಯವಸ್ಥೆಯ ಆಡಳಿತ ಸಾಗಿದೆ. ನಡು ರಸ್ತೆಯಲ್ಲಿ ಹೆಣ್ಣು ಮಗಳೊಬ್ಬಳಿಗೆ ಕಿರಾತಕರು ನೀಡುವ ಕಿರುಕುಳವನ್ನು ಮಾಮೂಲಿ ಘಟನೆ ಎಂಬ ರೀತಿಯಲ್ಲಿ ಹೇಳಿರುವ ಗೃಹ ಸಚಿವರ ಮಾತುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆಯನ್ನು ಕುಗ್ಗಿಸುವ ನಡೆಯಾಗಿದೆ. ಗೃಹ ಸಚಿವರ ಈ ಮಾತುಗಳು ಅವರ ಅಸಮರ್ಥತೆ ಮಾತುಗಳನ್ನು ಪ್ರತಿಬಿಂಬಿಸಿದೆ ಎಂದು ಲೇವಡಿ ಮಾಡಿದ್ದಾರೆ.

ರಾಜ್ಯದಲ್ಲಿ ಗಂಭೀರ ಘಟನೆಗಳು ನಡೆದಾಗಲೆಲ್ಲ ಸಹಜ ಎಂಬಂತೆ ಪ್ರತಿಕ್ರಿಯೆ ವ್ಯಕ್ತಪಡಿಸಿ ಕೈ ತೊಳೆದುಕೊಳ್ಳುವ ಗೃಹ ಸಚಿವರು ಬಿಟಿಎಂ ಲೇಔಟ್‌ನ ಘಟನೆಯನ್ನು ಅದೇ ರೀತಿಯಲ್ಲಿ ಪ್ರತಿಕ್ರಿಯಿಸಿರುವುದು ನಿಜಕ್ಕೂ ದುರ್ದೈವದ ಸಂಗತಿ. ರಾಜ್ಯದ ಮುಖ್ಯಮಂತ್ರಿಗಳು ಈ ಸಂಬಂಧ ರಾಜ್ಯದ ಕಾನೂನು ವ್ಯವಸ್ಥೆಯ ವೈಫಲ್ಯದ ಕುರಿತು ತಮ್ಮ ನೈತಿಕ ಜವಾಬ್ದಾರಿಯ ಹೇಳಿಕೆ ನೀಡಲಿ ಎಂದು ಸವಾಲು ಹಾಕಿದ್ದಾರೆ.

ಕಾನೂನು ಸುವ್ಯವಸ್ಥೆ ಸಮರ್ಥವಾಗಿ ನಿಭಾಯಿಸುವಲ್ಲಿ ಹಾಗೂ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಿಂದ ತೊಲಗುವವರೆಗೂ ರಾಜ್ಯದ ಜನರಿಗೆ ನೆಮ್ಮದಿ ಇಲ್ಲ ಎನ್ನುವುದು ಗೃಹ ಸಚಿವರ ಹೇಳಿಕೆಯಿಂದ ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

16 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

16 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

16 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

16 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

16 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

16 hours ago