ಬೆಂಗಳೂರು: ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್.ರಾಜಣ್ಣ ದೂರು ನೀಡಲಿ, ಬಳಿಕ ತನಿಖೆ ನಡೆಸುತ್ತೇವೆ. ಅವರು ದೂರು ನೀಡದೆ ನಾನೇನು ಮಾಡಲಿ, ನೀವೂ ಎಷ್ಟು ಬಾರಿ ತಿರುಗಿಸಿ, ಮುರುಗಿಸಿ ಕೇಳಿದು ಅಷ್ಟೇ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ.
ನಗರದಲ್ಲಿ ಇಂದು(ಮಾರ್ಚ್.25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ರಾಜಣ್ಣ ದೂರು ನೀಡದ ಬಗ್ಗೆ ನೀವು ಅವರನ್ನೇ ಕೇಳಬೇಕು. ಅವರಿಗೆ ಯಾವಾಗ ದೂರು ನೀಡಬೇಕು ಎನ್ನಿಸುತ್ತದೆ ಆಗ ದೂರು ನೀಡುತ್ತಾರೆ. ಅವರು ದೂರು ನೀಡಿದ ನಂತರವೇ ನಾವು ತನಿಖೆ ನಡೆಸಲು ಸಾಧ್ಯ. ಆದರೆ ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಒತ್ತಡವೂ ಇಲ್ಲ ಎಂದು ಹೇಳಿದರು.
ನನ್ನ ರಾಜ್ಯದ ಗೃಹ ಮಂತ್ರಿಯಾಗಿ ನನ್ನ ಕೆಲಸ ತನಿಖೆ ಘೋಷಣೆ ಮಾಡುವುದಾಗಿದೆ. ಯಾವ ಹಂತದ ತನಿಖೆ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ನಿರ್ಧಾರ ಮಾಡುತ್ತಾರೆ ಎಂದರು.
ಇದೇ ಸಂದರ್ಭದಲ್ಲಿ ಫೋನ್ ಟ್ಯಾಪಿಂಗ್ ಬಗ್ಗೆ ಮಾತನಾಡಿದ ಅವರು, ಈ ವಿಚಾರಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾವ ಸಚಿವರಾಗಲಿ ಅಥವಾ ಶಾಸಕರಾಗಲಿ ಯಾವುದೇ ಠಾಣೆಯಲ್ಲೂ ದೂರು ನೀಡಿಲ್ಲ. ಒಂದು ವೇಳೆ ಪೊಲೀಸ್ ಠಾಣೆಗೆ ದೂರು ಬಂದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…