ಬೆಂಗಳೂರು: ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ತರಲು ತೀರ್ಮಾನಿಸಿದ್ದು, ಇದರಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ನೀಡಿದರೆ ಅದನ್ನು ಬದಲಾವಣೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.5) ಸುಗ್ರೀವಾಜ್ಞೆಗೆ ರಾಜ್ಯಪಾಲತಿ ಸಹಿ ಹಾಕುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ರಾಜ್ಯಪಾಲರಿಗೆ ಕರಡು ಕಳಿಸಲಾಗಿದೆ. ಅವರು ಇಂದು ಸಹಿ ಹಾಕುವ ನಿರೀಕ್ಷೆ ಇದೆ. ಬಹುಶಃ ರಾಜ್ಯಪಾಲರು ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಅಂತಿಮವಾಗಿ ಸಹಿ ಹಾಕುವ ಸಾಧ್ಯತೆಗಳಿವೆ. ಅವರು ಸಹಿ ಹಾಕಿದರೆ ಇಂದೇ ಸುಗ್ರೀವಾಜ್ಞೆ ಜಾರಿಗೊಳಿಸಲಾಗುವುದು ಎಂದರು.
ಇದೇ ವೇಳೆ ಬಿಲ್ನಲ್ಲಿ ಕೆಲ ಬದಲಾವಣೆಗೆ ರಾಜ್ಯಪಾಲರು ಸೂಚಿಸಿದ್ದಾರೆಂಬ ಬಗ್ಗೆ ಮಾತನಾಡಿದ ಅವರು, ರಾಜ್ಯಪಾಲರು ಬದಲಾವಣೆಗೆ ಸೂಚನೆ ನೀಡಿರುವ ಕುರಿತು ನನಗೆ ಮಾಹಿತಿ ಇಲ್ಲ. ಈ ಮಾಹಿತಿ ರಾಜ್ಯ ಸರ್ಕಾರಕ್ಕೆ ಅಧಿಕೃತವಾಗಿ ರವಾನೆಯಾಗಿಲ್ಲ. ಆದರೆ ಅವರು ಕೆಲ ಅಂಶಗಳನ್ನು ಬದಲಾವಣೆ ಮಾಡಬೇಕೆಂದು ಸೂಚಿಸಿದರೆ, ಖಂಡಿತವಾಗಿಯೂ ಬದಲಾಯಿಸಿ ಮತ್ತೊಂದು ಬಾರಿ ರಾಜಭವನಕ್ಕೆ ಕಳುಹಿಸುತ್ತೇವೆ ಎಂದು ಹೇಳಿದರು.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…