ಬೆಂಗಳೂರು: ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತದೆ, ಅದರಲ್ಲಿಯೇ ಆ ಇಬ್ಬರ ಸಚಿವರ ಬಗ್ಗೆ ತಿಳಿಯಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು(ಮಾರ್ಚ್.10) ಶಾಸಕ ಸುನೀಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಜಿ.ಪರಮೇಶ್ವರ್ ಅವರು, ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಕನ್ನಡಿಗರು ಅಂದುಕೊಳ್ಳುವಷ್ಟು ಸುಲಭವಾಗಿಲ್ಲ. ಈ ಪ್ರಕರಣಕ್ಕೂ ರಾಜ್ಯ ಪೊಲೀಸ್ ಇಲಾಖೆಗೂ ಸಂಬಂಧವೇ ಇಲ್ಲ. ರನ್ಯಾ ಅವರನ್ನು ಬಂಧಿಸಿರುವುದು ಆದಾಯ ಗುಪ್ತಚರ ನಿರ್ದೇನಾಲಯ. ಹೀಗಾಗಿ ಆ ಇಲಾಖೆಯವರೇ ಸಿಬಿಐ ತನಿಖೆಗೂ ದೂರು ನೀಡಿದ್ದಾರೆ ಎಂದರು.
ಇನ್ನು ರಾಜ್ಯದ ಇಬ್ಬರು ಸಚಿವರ ಕೈವಾಡವಿದೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇದರ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲ. ಡಿಆರ್ಐ ತನಿಖಾ ತಂಡವೂ ನಮ್ಮ ಪೊಲೀಸ್ ಅಧಿಕಾರಿಗಳಿಗೂ ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ. ಈ ಪ್ರಕರಣದಲ್ಲಿ ನಾವು ಯಾವ ಪ್ರಭಾವಕ್ಕೂ ಒಳಗಾಗಿಲ್ಲ. ಸಚಿವರಿಬ್ಬರ ಕೈವಾಡ ಇದೇ ಎಂದರೆ ಅದು ಯಾವ ಸಚಿವರೆಂದು ಸಿಬಿಐ ತನಿಖೆಯಲ್ಲಿಯೇ ಗೊತ್ತಾಗಲಿದೆ ಎಂದು ಹೇಳಿದರು.
ಶಾಸಕ ಸುನೀಲ್ ಕುಮಾರ್ ಅವರ ಪ್ರಶ್ನೆ ಏನು?
ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಚಿವರಿಬ್ಬರ ಕೈವಾಡವಿದೆ. ಅದು ಯಾವ ಸಚಿವರೆಂದು ತನಿಖೆ ಮಾಡಲು ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆಗೆ ವಹಿಸಬೇಕು. ಅಲ್ಲದೇ ಆ ನಟಿ ವಿದೇಶಕ್ಕೆ ಹೋಗುವಾಗ ಯಾವುದೇ ತಪಾಸಣೆ ಇಲ್ಲದೇ, ಅಧಿಕಾರಿಗಳೇ ರಕ್ಷಣೆ ನೀಡುತ್ತಿದ್ದರು ಅಂದರೆ ಏನು ಅರ್ಥ ಎಂದು ಪ್ರಶ್ನಿಸಿದ್ದರು.
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…
ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್…