ರಾಜ್ಯ

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ| ಸಿಬಿಐ ತನಿಖೆಯಲ್ಲಿ ಸಚಿವರಿಬ್ಬರ ಬಗ್ಗೆ ತಿಳಿಯಲಿದೆ: ಜಿ.ಪರಮೇಶ್ವರ್‌

ಬೆಂಗಳೂರು: ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತದೆ, ಅದರಲ್ಲಿಯೇ ಆ ಇಬ್ಬರ ಸಚಿವರ ಬಗ್ಗೆ ತಿಳಿಯಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು(ಮಾರ್ಚ್.10) ಶಾಸಕ ಸುನೀಲ್‌ ಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಜಿ.ಪರಮೇಶ್ವರ್‌ ಅವರು, ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಕನ್ನಡಿಗರು ಅಂದುಕೊಳ್ಳುವಷ್ಟು ಸುಲಭವಾಗಿಲ್ಲ. ಈ ಪ್ರಕರಣಕ್ಕೂ ರಾಜ್ಯ ಪೊಲೀಸ್‌ ಇಲಾಖೆಗೂ ಸಂಬಂಧವೇ ಇಲ್ಲ. ರನ್ಯಾ ಅವರನ್ನು ಬಂಧಿಸಿರುವುದು ಆದಾಯ ಗುಪ್ತಚರ ನಿರ್ದೇನಾಲಯ. ಹೀಗಾಗಿ ಆ ಇಲಾಖೆಯವರೇ ಸಿಬಿಐ ತನಿಖೆಗೂ ದೂರು ನೀಡಿದ್ದಾರೆ ಎಂದರು.

ಇನ್ನು ರಾಜ್ಯದ ಇಬ್ಬರು ಸಚಿವರ ಕೈವಾಡವಿದೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇದರ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲ. ಡಿಆರ್‌ಐ ತನಿಖಾ ತಂಡವೂ ನಮ್ಮ ಪೊಲೀಸ್‌ ಅಧಿಕಾರಿಗಳಿಗೂ ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ. ಈ ಪ್ರಕರಣದಲ್ಲಿ ನಾವು ಯಾವ ಪ್ರಭಾವಕ್ಕೂ ಒಳಗಾಗಿಲ್ಲ. ಸಚಿವರಿಬ್ಬರ ಕೈವಾಡ ಇದೇ ಎಂದರೆ ಅದು ಯಾವ ಸಚಿವರೆಂದು ಸಿಬಿಐ ತನಿಖೆಯಲ್ಲಿಯೇ ಗೊತ್ತಾಗಲಿದೆ ಎಂದು ಹೇಳಿದರು.

ಶಾಸಕ ಸುನೀಲ್‌ ಕುಮಾರ್‌ ಅವರ ಪ್ರಶ್ನೆ ಏನು?

ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣದಲ್ಲಿ ಸಚಿವರಿಬ್ಬರ ಕೈವಾಡವಿದೆ. ಅದು ಯಾವ ಸಚಿವರೆಂದು ತನಿಖೆ ಮಾಡಲು ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆಗೆ ವಹಿಸಬೇಕು. ಅಲ್ಲದೇ ಆ ನಟಿ ವಿದೇಶಕ್ಕೆ ಹೋಗುವಾಗ ಯಾವುದೇ ತಪಾಸಣೆ ಇಲ್ಲದೇ, ಅಧಿಕಾರಿಗಳೇ ರಕ್ಷಣೆ ನೀಡುತ್ತಿದ್ದರು ಅಂದರೆ ಏನು ಅರ್ಥ ಎಂದು ಪ್ರಶ್ನಿಸಿದ್ದರು.

ಅರ್ಚನ ಎಸ್‌ ಎಸ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

7 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

7 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

8 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

9 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

9 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

9 hours ago