ರಾಜ್ಯ

ಮುಡಾ ಹಗರಣ: ಅಗತ್ಯಬಿದ್ದರೆ ಕಾನೂನು ಹೋರಾಟ ಎಂದ ಜಿ. ಪರಮೇಶ್ವರ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂದು ಭಾವಿಸಿದ್ದೇವೆ. ಒಂದು ವೇಳೆ ಅವರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿದರೇ ನಾನು ಕಾನೂನು ಹೋರಾಟ ಮಾಡಲು ಸಿದ್ದವಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ನೀಡಿದರೆ ನಾವು ಕಾನೂನು ಹೋರಾಟ ಮಾಡುತ್ತೇವೆ. ಕಾನೂನು ಹೋರಾಟ ಮುಂದುವರಿದ ಬಳಿಕ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ನಿರ್ಧರಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ಹತ್ತಾರು ಪ್ರಕರಣಗಳು ರಾಜ್ಯಪಾಲರ ಟೇಬಲ್‌ ಮೇಲಿದೆ. ಆದರೂ ಅವರು ಮುಡಾ ವಿಚಾರದಲ್ಲಿ ತರಾತುರಿಯಲ್ಲಿ ನೋಟಿಸ್‌ ನೀಡಿದ್ದಾರೆ. ಕೇವಲ ಒಂದೇ ದಿನದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಾಸ್‌ ನೋಟಿಸ್‌ ನೀಡಲಾಗಿದೆ. ಇದರ ಹಿಂದಿನ ಉದ್ದೇಶದ ಬಗ್ಗೆ ಕೇವಲ ರಾಜ್ಯಪಾಲರಷ್ಟೆ ಹೇಳಬೇಕು ಎಂದರು.

ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ನಡೆ ಏನೆಂಬುದನ್ನು ಕಾದು ನೋಡುತ್ತೇವೆ. ಬಳಿಕ ಕಾನೂನು ಹೋರಾಟ ಮೂಲಕ ಉತ್ತರ ನೀಡುವುದಾಗಿ ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರೇಸ್‌ಕ್ಲಬ್‌ ಸುತ್ತಮುತ್ತ ಕುದುರೆ ಚಟುವಟಿಕೆಗಳಿಗೆ ನಿರ್ಬಂಧ

ಮೈಸೂರು : ಮೈಸೂರಿನ ರೇಸ್‌ಕ್ಲಬ್‌ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…

2 mins ago

ರಸ್ತೆ ಅಪಘಾತ ಸಂಖ್ಯೆ ಶೂನ್ಯವಾಗಬೇಕು : ನಿ.ನ್ಯಾಯಮೂರ್ತಿ ಅಭಯ್‌ ಮನೋಹರ್‌ ಸಪ್ರೆ

ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…

17 mins ago

ಸ್ಲೀವ್‌ಲೆಸ್‌, ಹರಿದ ಜೀನ್ಸ್‌ ಹಾಕುವ ಸರ್ಕಾರಿ ನೌಕರರೇ ಹುಷಾರ್.. : ರಾಜ್ಯ ಸರ್ಕಾರದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…

47 mins ago

ಮೈಸೂರು ವಿಶ್ವವಿದ್ಯಾನಿಲಯ ; ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ…

52 mins ago

ವಿಶೇಷ ಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧ

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…

56 mins ago

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…

2 hours ago