ರಾಜ್ಯ

ಮಹದೇವಪ್ಪ ವೈಯಕ್ತಿಕ ಕೆಲಸಕ್ಕೆ ಬಂದಿದ್ದರು, ತಿಂಡಿಗೂ-ಊಟಕ್ಕೂ ಹೋಗಬಾರದಾ?: ಜಿ.ಪರಮೇಶ್ವರ್‌

ಬೆಂಗಳೂರು: ಸಚಿವ ಎಚ್‌.ಸಿ.ಮಹದೇವಪ್ಪ ಅವರು ತಮ್ಮ ಮನೆಗೆ ವೈಯಕ್ತಿಕ ಕೆಲಸಕ್ಕೆ ಬಂದಿದ್ದರು. ಅದರಲ್ಲಿ ವಿಶೇಷವೇನಿಲ್ಲ, ಸಚಿವರುಗಳು ಒಟ್ಟಿಗೆ ತಿಂಡಿಗೂ ಮತ್ತು ಊಟಕ್ಕೂ ಹೋಗಬಾರದಾ? ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಮತ್ತಷ್ಟು ಬೆಳವಣಿಗೆ ನಡೆಯುತ್ತಿದ್ದು, ರಾಜ್ಯ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ರಾಜ್ಯದಲ್ಲಿರುವಾಗಲೇ ಇಂದು ಗೃಹ ಸಚಿವ ಪರಮೇಶ್ವರ್‌ ಹಾಗೂ ಸಚಿವ ಎಚ್‌.ಸಿ.ಮಹದೇವಪ್ಪ ಅವರ ಭೇಟಿ ಕುತೂಹಲಕರ ಮೂಡಿಸಿದೆ. ಆದರೆ ಎಚ್.ಸಿ.ಮಹದೇವಪ್ಪ ಅವರು ಗೃಹ ಸಚಿವರ ಮನೆಯಿಂದ ತೆರಳುವಾಗ ನಾವು ಯಾವುದೇ ವಿಚಾರದ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ನಗರದ ಸದಾಶಿವನಗರದಲ್ಲಿ ಇಂದು(ಜನವರಿ.17) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹದೇವಪ್ಪ ಅವರು ವೈಯಕ್ತಿಕ ಕೆಲಸಕ್ಕೆ ಬಂದಿದ್ದರು. ಅವರು ನಮ್ಮ ಮನೆಗೆ ಅನೇಕ ಬಾರಿ ತಮ್ಮ ಮನೆಗೆ ಭೇಟಿ ನೀಡುತ್ತಿರುತ್ತಾರೆ. ನಾವು ಅವರ ಮನೆಗೆ ಹೋಗುತ್ತೇವೆ, ಅವರು ಬರುತ್ತಾರೆ. ತಿಂಡಿಗೂ ಮತ್ತು ಊಟಕ್ಕೂ ಸಚಿವರು ಮನೆಗೆ ಹೋಗಬಾರದಾ? ಅದರಲ್ಲಿ ವಿಶೇಷ ಏನಿದೆ. ಅವರು ತಮ್ಮ ನಿವಾಸಕ್ಕೆ ಬಂದು ಯಾವುದೇ ಚರ್ಚೆ ನಡೆಸಿಲ್ಲ ಎಂದರು.

ಸಚಿವರು ಅಂದಮೇಲೆ ಒಬ್ಬರ ಮನೆಗೆ, ಮತ್ತೊಬ್ಬರು ತಿಂಡಿಗೋ ಅಥವಾ ಊಟಕ್ಕೋ ಹೋಗುವುದು ಸಹಜ. ಆದರೆ ಈ ವೇಳೆ ಚರ್ಚೆ ನಡೆಯುತ್ತವೆ ಎಂದರೆ ಅದು ಸುಳ್ಳು. ಬೇರೆ ಯಾವುದಕ್ಕೂ ಇದಕ್ಕೂ ಸಂಬಂಧ ಇಲ್ಲ. ನಮ್ಮ ವೈಯಕ್ತಿಕ ಭೇಟಿಗಳನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

6 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

9 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

9 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

9 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

10 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

10 hours ago