ಬೆಂಗಳೂರು: ಸಚಿವ ಎಚ್.ಸಿ.ಮಹದೇವಪ್ಪ ಅವರು ತಮ್ಮ ಮನೆಗೆ ವೈಯಕ್ತಿಕ ಕೆಲಸಕ್ಕೆ ಬಂದಿದ್ದರು. ಅದರಲ್ಲಿ ವಿಶೇಷವೇನಿಲ್ಲ, ಸಚಿವರುಗಳು ಒಟ್ಟಿಗೆ ತಿಂಡಿಗೂ ಮತ್ತು ಊಟಕ್ಕೂ ಹೋಗಬಾರದಾ? ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಮತ್ತಷ್ಟು ಬೆಳವಣಿಗೆ ನಡೆಯುತ್ತಿದ್ದು, ರಾಜ್ಯ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ರಾಜ್ಯದಲ್ಲಿರುವಾಗಲೇ ಇಂದು ಗೃಹ ಸಚಿವ ಪರಮೇಶ್ವರ್ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರ ಭೇಟಿ ಕುತೂಹಲಕರ ಮೂಡಿಸಿದೆ. ಆದರೆ ಎಚ್.ಸಿ.ಮಹದೇವಪ್ಪ ಅವರು ಗೃಹ ಸಚಿವರ ಮನೆಯಿಂದ ತೆರಳುವಾಗ ನಾವು ಯಾವುದೇ ವಿಚಾರದ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ನಗರದ ಸದಾಶಿವನಗರದಲ್ಲಿ ಇಂದು(ಜನವರಿ.17) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹದೇವಪ್ಪ ಅವರು ವೈಯಕ್ತಿಕ ಕೆಲಸಕ್ಕೆ ಬಂದಿದ್ದರು. ಅವರು ನಮ್ಮ ಮನೆಗೆ ಅನೇಕ ಬಾರಿ ತಮ್ಮ ಮನೆಗೆ ಭೇಟಿ ನೀಡುತ್ತಿರುತ್ತಾರೆ. ನಾವು ಅವರ ಮನೆಗೆ ಹೋಗುತ್ತೇವೆ, ಅವರು ಬರುತ್ತಾರೆ. ತಿಂಡಿಗೂ ಮತ್ತು ಊಟಕ್ಕೂ ಸಚಿವರು ಮನೆಗೆ ಹೋಗಬಾರದಾ? ಅದರಲ್ಲಿ ವಿಶೇಷ ಏನಿದೆ. ಅವರು ತಮ್ಮ ನಿವಾಸಕ್ಕೆ ಬಂದು ಯಾವುದೇ ಚರ್ಚೆ ನಡೆಸಿಲ್ಲ ಎಂದರು.
ಸಚಿವರು ಅಂದಮೇಲೆ ಒಬ್ಬರ ಮನೆಗೆ, ಮತ್ತೊಬ್ಬರು ತಿಂಡಿಗೋ ಅಥವಾ ಊಟಕ್ಕೋ ಹೋಗುವುದು ಸಹಜ. ಆದರೆ ಈ ವೇಳೆ ಚರ್ಚೆ ನಡೆಯುತ್ತವೆ ಎಂದರೆ ಅದು ಸುಳ್ಳು. ಬೇರೆ ಯಾವುದಕ್ಕೂ ಇದಕ್ಕೂ ಸಂಬಂಧ ಇಲ್ಲ. ನಮ್ಮ ವೈಯಕ್ತಿಕ ಭೇಟಿಗಳನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…