ರಾಜ್ಯ

ಎಸ್‌ಸಿ,ಎಸ್‌ಟಿ ಸಭೆ ಸಹಿಸಲ್ಲವೆಂದು ಹೇಳಿದವರಿಗೆ ತಕ್ಕ ಉತ್ತರ ನೀಡುತ್ತೇವೆ: ಜಿ.ಪರಮೇಶ್ವರ್‌

ಬೆಂಗಳೂರು: ನನಗೆ ಯಾರು ಎಸ್‌ಸಿ,ಎಸ್‌ಟಿ ಸಮಾವೇಶದ ಕುರಿತು ಚರ್ಚೆ ಮಾಡುವುದನ್ನು ಸಹಿಸುವುದಿಲ್ಲ ಎಂದು ಹೇಳಿಲ್ಲ. ಆದರೆ ಸಭೆ ಮಾಡಿದರೆ ಸಹಿಸುವುದಿಲ್ಲ ಎಂದು ಯಾರಾದರೂ ಹೇಳಿದರೆ ಅದಕ್ಕೆ ಸರಿಯಾದ ಉತ್ತರ ನೀಡುವ ಶಕ್ತಿ ನಮಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಆ ರೀತಿಯಾಗಿ ಯಾರಾದರೂ ಹೇಳಿದರೆ, ನಾವು ತಲೆ ಕೆಡಿಸಿಕೊಳ್ಳುವುದು ಇಲ್ಲ. ವಿಧಾನಸಭೆ ಚುನಾವಣೆಗೂ ಮೊದಲು ಚಿತ್ರದುರ್ಗದಲ್ಲಿ ಎಸ್‌ಸಿ,ಎಸ್‌ಟಿ ಸಮಾವೇಶ ಮಾಡಲಾಗಿತ್ತು ಎಂದಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಅನೇಕ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಹೇಳಿಕೊಂಡಿದ್ದೆವು. ಚಿತ್ರದುರ್ಗ ನಿರ್ಣಯವೆಂದು ಹೆಸರು ಕೊಟ್ಟು ಬೇಡಿಕೆಗಳನ್ನು ಇಟ್ಟಿದ್ದೆವು. ಅದರಂತೆಯೇ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಹೀಗಾಗಿ ಸರ್ಕಾರ ಅನೇಕ ಭರವಸೆಗಳನ್ನು ಈಡೇರಿಸುವ ಕಾರ್ಯವನ್ನು ಮಾಡಿದೆ ಎಂದು ಹೇಳಿದ್ದಾರೆ.

ಇನ್ನೂ ಕೇಂದ್ರ ಸರ್ಕಾರದಿಂದ ಪೋಸ್ಟ್‌ ಮೆಟ್ರಿಕ್‌ ಸ್ಕಾಲರ್‌ಶಿಪ್‌ ಬರುತ್ತಿಲ್ಲ. ಕೇಂದ್ರದಿಂದ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನದ ಪಾಲು ಸಹ ರಾಜ್ಯಕ್ಕೆ ಬರುತ್ತಿಲ್ಲ. ಈ ಬಗ್ಗೆ ಎಲ್ಲವನ್ನು ಚರ್ಚೆ ಮಾಡಬೇಕಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಸಮಸ್ಯೆಗಳನ್ನು ಬಗೆಹರಿಸಬೇಕು. ಈ ನಿಟ್ಟಿನಲ್ಲಿ ಸಭೆ ಸೇರಲು ಆದರೆ ಈ ವಿಚಾರವನ್ನು ಹೈಕಮಾಂಡ್‌ ನಾಯಕರ ಗಮನಕ್ಕೆ ತಂದಿರಲಿಲ್ಲ. ಏಕೆಂದರೆ ನಮ್ಮದೆ ಆಂತರಿಕ ವಿಚಾರ ಆಗಿರುವುದರಿಂದ ತಿಳಿಸುವ ಅವಶ್ಯಕತೆ ಇಲ್ಲವೆಂದು ಭಾವಿಸಿ ಹೇಳಿರಲಿಲ್ಲ ಎಂದು ತಿಳಿಸಿದ್ದಾರೆ.

ನಮ್ಮ ಸರ್ಕಾರದ ನಿರ್ಧಾರ ಹಾಗೂ ಪಕ್ಷದ ವಿಚಾರಗಳು ಬಂದಾಗ ಮಾತ್ರ ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯಾಗಿರುವ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ಗಮನಕ್ಕೆ ಹೋಗುತ್ತವೆ. ಈ ಸಮಾವೇಶ ರಾಜಕೀಯ ಪ್ರೇರಿತ ಅಥವಾ ರಾಜಕೀಯಕ್ಕಾಗಿ ನಡೆಸುತ್ತಿರುವ ಸಮಾವೇಶವಲ್ಲ. ಸುರ್ಜೇವಾಲಾ ಅವರು ನನಗೆ ಕರೆ ಮಾಡಿ ಸಮಾವೇಶದಲ್ಲಿ ಪಾಲ್ಗೋಳ್ಳಬೇಕೆಂದು ತಿಳಿಸಿದ್ದಾರೆ. ಆದರೆ ಈಗ ಭಾಗವಹಿಸಲು ಅವರಿಗೆ ಸಮಯವಿಲ್ಲವೆಂದು ಹೇಳಿದ್ದಾರೆ. ಹೀಗಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹೇಳಿದ್ದರುವ ಕಾರಣ ಸಮಾವೇಶವನ್ನು ಮುಂದೂಡಿದ್ದೇವೆ ಅಷ್ಟೇ. ಅದನ್ನು ರದ್ದುಪಡಿಸಿಲ್ಲ ಎಂದು ಹೇಳಿದ್ದಾರೆ.

 

 

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

11 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

12 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

12 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

14 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

15 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

15 hours ago