g parameshwara pahalgam attack
ಬೆಂಗಳೂರು: ಭದ್ರತಾ ವೈಫಲ್ಯದ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಗಾವಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಮೇಲೆ ಹಲ್ಲೆಗೆ ಮುಂದಾಗಿದ್ದ ಪ್ರಕರಣದ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ. ಸಿಎಂ ಏಕೆ ಅಷ್ಟೊಂದು ಉದ್ವೇಗಕ್ಕೆ ಒಳಗಾದರು ಎಂಬುದು ಗೊತ್ತಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದಾರು ಮಂದಿ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತರು ಕಾಂಗ್ರೆಸ್ನ ಶಾಲು ಹಾಕಿಕೊಂಡು ಒಳಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವಾಗ ಅಡ್ಡಿಪಡಿಸಲು ಯತ್ನಿಸಿದ್ದಾರೆ. ಇದರಲ್ಲಿ ಭದ್ರತಾ ಲೋಪವಾಗಿದೆಯೇ ಎಂಬುದನ್ನು ಮಾಹಿತಿ ನೀಡಲು ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದರು.
ಕಾಂಗ್ರೆಸ್ ಶಾಲು ಹಾಕಿಕೊಂಡು ನಮ ಪಕ್ಷದ ಕಾರ್ಯಕ್ರಮಕ್ಕೆ ಬಂದು ಅಡ್ಡಿಪಡಿಸಿ ನಂತರ ಭದ್ರತಾ ವೈಫಲ್ಯ ಎಂದು ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಅವರು ಬಿಜೆಪಿಯ ಶಾಲು ಹಾಕಿಕೊಂಡು ಬಂದಿದ್ದರೆ ಅದು ಬೇರೆಯ ಮಾತು. ಕಾಂಗ್ರೆಸ್ ಶಾಲು ಹಾಕಿಕೊಳ್ಳಲು ಅವರಿಗೆ ಯಾವ ನೈತಿಕತೆ ಇದೆಯೋ ಗೊತ್ತಿಲ್ಲ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪಹಲ್ಗಾಮ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಯಾವುದೇ ಮೃದು ಧೋರಣೆ ಹೊಂದಿಲ್ಲ. ದೇಶದ ಭದ್ರತೆ ದೃಷ್ಟಿಯಿಂದ ಕಾಂಗ್ರೆಸ್ನಷ್ಟು ತ್ಯಾಗ ಬಲಿದಾನಗಳನ್ನು ಬೇರೆ ಇನ್ಯಾರು ಮಾಡಲು ಸಾಧ್ಯವಿಲ್ಲ. ಬೇರೆಯವರಿಂದ ನಾವು ಪಾಠ ಹೇಳಿಸಿಕೊಳ್ಳಬೇಕಿಲ್ಲ ಎಂದರು.
ಇನ್ನು ಪಾಕಿಸ್ತಾನದ ಪ್ರಜೆಗಳು ದೇಶದಲ್ಲಿ 400 ಜನ ಇದ್ದರು. ಅವರನ್ನು ವಾಪಸ್ ಕಳುಹಿಸಲಾಗಿದೆ. ಲಾಂಗ್ಟರ್ಮ್ ವೀಸಾ ಹಾಗೂ ಇಲ್ಲಿಯವರನ್ನು ಮದುವೆಯಾಗಿ ವಾಸಿಸುವವರಿಗೆ ಕೇಂದ್ರ ಸರ್ಕಾರ ವಿನಾಯಿತಿ ನೀಡಿದೆ ಎಂದರು. ಭದ್ರತೆಯ ದೃಷ್ಟಿಯಿಂದ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳಿಗೆ ಕಾಂಗ್ರೆಸ್ ಪಕ್ಷ ಬೆಂಬಲ ವ್ಯಕ್ತಪಡಿಸಿದೆ ಎಂದು ಪುನರುಚ್ಚರಿಸಿದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…