ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್.ರಾಜಣ್ಣ ಅವರು ದೂರು ನೀಡಿದರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.23) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್ ವಿಚಾರವಾಗಿ ರಾಜಣ್ಣ ಅವರು ಇನ್ನೂ ದೂರು ನೀಡಿಲ್ಲ. ಅವರು ದೂರು ನೀಡಿದ ಕೂಡಲೇ ತನಿಖೆಗೆ ವಹಿಸುತ್ತೇವೆ. ಅಲ್ಲದೇ ನಾನು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಉನ್ನತ ಮಟ್ಟದ ತನಿಖೆಗೆ ಅಂದರೆ ಯಾವ ತನಿಖೆಗೆ ಈ ಕೇಸ್ ಅನ್ನು ವಹಿಸಬೇಕು ಎಂಬುದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.
ರಾಜ್ಯ ಸರ್ಕಾರ ಹನಿಟ್ರ್ಯಾಪ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜಣ್ಣ ಅವರು ಇಷ್ಟೊತ್ತಿಗೆ ದೂರು ನೀಡಿದ್ದರೆ ಯಾವ ಸ್ವರೂಪದ ತನಿಖೆ ಎಂದು ಘೋಷಣೆ ಮಾಡುತ್ತಿದ್ದೇವು. ಆದರೆ ಈಗಾಗಲೇ ಯಾವ ತನಿಖೆಗೆ ನೀಡಬೇಕೆಂದು ಪ್ರಾಥಮಿಕವಾಗಿ ಅಂದುಕೊಂಡಿದ್ದೇವೆ. ಹಾಗಾಗಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಿದ ಬಳಿಕ ಯಾವ ಮಟ್ಟದ ತನಿಖೆ ಎಂದು ಪ್ರಕಟಿಸುತ್ತೇವೆ ಎಂದು ಹೇಳಿದರು.
ಇನ್ನೂ ಸಿಬಿಐ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ ಎಂಬ ಬಿಜೆಪಿ ಆಗ್ರಹದ ಬಗ್ಗೆ ಮಾತನಾಡಿದ ಅವರು, ನಾವು ನಮ್ಮದೇ ರೀತಿಯಲ್ಲಿ ಪರಿಶೀಲಿಸಿ ನಿರ್ಧಾರ ಮಾಡ್ತೇವೆ. ಇಷ್ಟು ದೊಡ್ಡ ಘಟನೆ ನಡೆದಿದೆ, ವಿಧಾನಸೌಧದಲ್ಲಿ ಚರ್ಚೆ ಆಗಿದೆ. ನಡೆಯದಿರೋದೆಲ್ಲ ನಡೆದಿದೆ. ಅಂತಹದರಲ್ಲಿ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ ಅಂದರೆ ಆಗಲ್ಲ ಎಂದರು.
ಇದೇ ಸಂದರ್ಭದಲ್ಲಿ ಸದನದಲ್ಲಿ ಏಕಾಏಕಿ ರಾಜಣ್ಣ ಮಾತಾಡಿದ್ದಕ್ಕೆ ಹೈಕಮಾಂಡ್ ಬೇಸರವಾಗಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ನೋಡಿಕೊಳ್ಳುತ್ತಾರೆ. ಹಾಗಾಗಿ ಈ ಕುರಿತು ನನಗೆ ಅಷ್ಟು ಗೊತ್ತಿಲ್ಲ ಎಂದು ತಿಳಿಸಿದರು.
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…
ನವದೆಹಲಿ: 2026ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…
ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…