ಬೆಂಗಳೂರು: ಕೆಆರ್ಪಿಪಿ ಸಂಸ್ಥಾಪಕ ಗಾಲಿ ಜನಾರ್ಧ ರೆಡ್ಡಿ ಅವರು ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ, ಇಂದು (ಮಾ.೨೫) ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.
ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ತೆರಳಿದ ಜನಾರ್ಧನ ರೆಡ್ಡಿ, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಂದ ಪಕ್ಷದ ಭಾವುಟ ಪಡೆದು, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನನ್ನು ಪಕ್ಷಕ್ಕೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಹ್ವಾನಿಸಿದರು. ನನ್ನ ರಕ್ತದ ಕಣ ಕಣದಲ್ಲಿ ಬಿಜೆಪಿಯಿದೆ ಹಾಗಾಗಿ ನನ್ನ ಕೆಆರ್ಪಿಪಿ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ ಸೇರಿಕೊಂಡಿದ್ದೇನೆ ಎಂದು ವಿವರಿಸಿದರು.
ಬಿಎಸ್ವೈ ಸಿಎಂ ಆಗಿದ್ದಾಗ ನನ್ನನ್ನು ಸಚಿವನನ್ನಾಗಿ ಮಾಡಿ ಉನ್ನತ ಸ್ಥಾನಮಾನ ನೀಡಿದ್ದಾರೆ. ಈಗ ನಾನು ಯಾವುದೇ ಷರತ್ತು ವಿಧಿಸದೇ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಬಿಜೆಪಿಗೆ ಸೇರಿಕೊಂಡಿದ್ದೇನೆ. ನನಗರ ಯಾವುದೇ ಹುದ್ದೆಯ ಆಸೆಯಿಲ್ಲ. ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಲು ಕೆಲಸ ಮಾಡುವುದಾಗಿ ತಿಳಿಸಿದರು.
ಇದೇ ವೇಳೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಶ್ರೀರಾಮುಲುಗೆ ಧನ್ಯವಾದ ಅರ್ಪಿಸಿದರು.
ಜನಾರ್ಧನ ರೆಡ್ಡಿ ಪಕ್ಷಕ್ಕೆ ವಾಪಾಸಾಗಿರುವುದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಜನಾರ್ಧನ ರೆಡ್ಡಿ ಅವರನ್ನು ಸರಿಯಾಗಿ ಬಳಸಿಕೊಳ್ಳಲಾಗುವುದು. ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಪಕ್ಷಕ್ಕೆ ಬಂದಿರುವುದು ಸಂತೋಷದ ವಿಷಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಜನಾರ್ಧನ ರೆಡ್ಡಿ ಅವರ ವಾಪಾಸಾತಿಗೆ ಹರ್ಷ ವ್ಯಕ್ತಪಡಿಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…