ರಾಜ್ಯ

ಗದಗ: ಆಸ್ಪತ್ರೆ ಆವರಣದಲ್ಲಿ ರೀಲ್ಸ್ ಮಾಡಿ 38 ವಿದ್ಯಾರ್ಥಿಗಳ ಅಮಾನತು

ಗದಗ: ನಗರದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್) ಎಂಬಿಬಿಎಸ್ ಇಂಟರ್ನ್‌ಶಿಪ್ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ರೀಲ್ಸ್‌ ಮಾಡಿದ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ 38 ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತು ಮಾಡಿ ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

ಎಂಬಿಬಿಎಸ್ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಎದುರೇ ಕನ್ನಡ, ತಮಿಳು, ತೆಲುಗು, ಹಿಂದಿ ಚಿತ್ರ ಗೀತೆಗಳಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ರೀಲ್ಸ್‌ಗಳನ್ನು ನೋಡಿ ಕೆಲವರು ಇಷ್ಟಪಟ್ಟರೆ, ಇನ್ನು ಕೆಲವರು ನಿಮ್ಮ ಹುಚ್ಚಾಟಕ್ಕೆ ಬೇರೆ ಜಾಗ ಸಿಗಲಿಲ್ವಾ?’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಎಂಬಿಬಿಎಸ್‌ ಇಂಟರ್ನ್‌ಶಿಪ್ ವಿದ್ಯಾರ್ಥಿಗಳು ಅನುಮತಿ ಪಡೆಯದೇ ಜಿಲ್ಲಾ ಆಸ್ಪತ್ರೆಯ ವಿವಿಧೆಡೆ ರೀಲ್ಸ್ ಮಾಡಿದ್ದಾರೆ. ಇದರ ಬಗ್ಗೆ ವಿಚಾರಿಸಿದಾಗ, ಏಪ್ರಿಲ್‌ನಲ್ಲಿ ಪದವಿ ಪೂರ್ಣಗೊಳ್ಳುವ ಸಂಭ್ರಮದಲ್ಲಿ ಯಾರಿಗೂ ತೊಂದರೆ ಆಗದಂತೆ ರೀಲ್ಸ್ ಮಾಡಿರುವುದಾಗಿ ತಿಳಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿದ್ದು ತಪ್ಪು’ ಗ್ರಾಜ್ಯುಯೇಷನ್ ಡೇ ಮಾಡದಿರಲು ನಿರ್ಧರಿಸಲಾಗಿದೆ’ ಎಂದು ಡಾ. ಬಸವರಾಜ ಬೊಮ್ಮನಹಳ್ಳಿ ತಿಳಿಸಿದ್ದಾರೆ.

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

2 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

3 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

16 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

16 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

17 hours ago