ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಹಾತ್ಮಾ ಗಾಂಧೀಜಿಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಇಂದಿನ ದಿನ ಸ್ಮರಿಸಲಾಗುತ್ತಿದೆ. ಭಾರತ ಹಳ್ಳಿಗಳ ದೇಶವಾಗಿದ್ದು, ಅಂದು ಶೇ.80 ರಷ್ಟು ಜನ ಹಳ್ಳಿಗಳಲ್ಲಿ ವಾಸಿಸುತ್ತಿದ್ದರು. ಗ್ರಾಮಗಳು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಸ್ವಾವಲಂಬಿಯಾಗಬೇಕು. ಗ್ರಾಮಗಳ ಪ್ರಗತಿಯಲ್ಲಿಯೇ ದೇಶದ ಪ್ರಗತಿ ಅಡಗಿದೆ ಎಂದು ಅವರು ನುಡಿದಿದ್ದರು.
ಪಂಚಾಯತಿಗಳಿಗೆ ಮಹಾತ್ಮಾ ಗಾಂಧೀಜಿ ಹೆಸರು
ರಾಜ್ಯದಲ್ಲಿ ಸುಮಾರು 6 ಸಾವಿರ ಪಂಚಾಯ್ತಿಗಳಿವೆ. ಅವುಗಳಿಗೆ ಮಹಾತ್ಮಾಗಾಂಧಿಯವರ ಹೆಸರು ಇಡಬೇಕೆಂಬ ನಿರ್ಧಾರವನ್ನು ಕೈಗೊಳ್ಳಲಿದ್ದೇವೆ. ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದರು. ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿಯಿಂದ ಅಲ್ಲ ಎಂಬುದನ್ನು ಪ್ರತಿಪಾದಿಸಿದ್ದುದಾಗಿ ತಿಳಿಸಿದರು.
ಗಾಂಧೀಜಿಯವರ ಕೊಡುಗೆಯನ್ನು ಇಡೀ ದೇಶ ಸ್ಮರಿಸುತ್ತದೆ
ಇಂತಹ ಮಹಾನ್ ಚೇತನ ಗುಂಡೇಟಿಗೆ ಬಲಿಯಾಗಿ ನಮ್ಮನ್ನ ಅಗಲಿದ್ದಾರೆ. ಅವರ ಅಭಿಮಾನಿಯೊಬ್ಬರು- ಗಾಂಧೀಜಿಯವರು 100 ವರ್ಷ ಬದುಕಬೇಕೆಂದು ಹಾರೈಸಿದ್ದಕ್ಕೆ, ಗಾಂಧೀಜಿಯವರು ‘’ನಾನು 125 ವರ್ಷಗಳು ದೇಶಕ್ಕಾಗಿ ಬದುಕಲಿಚ್ಛಿಸುತ್ತೇನೆ’ ಎಂದು ಉತ್ತರಿಸಿದ್ದರು. ಇಡೀ ದೇಶ ಅವರ ಕೊಡುಗೆಯನ್ನು ಸ್ಮರಿಸುತ್ತದೆ ಎಂದರು.
ಬಾಕಿ ಬಿಲ್ಲುಗಳು ಹಿಂದಿನ ಬಿಜೆಪಿ ಸರ್ಕಾರದ್ದು
ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಹಿಂದಿನ ಬಿಜೆಪಿ ಸರ್ಕಾರದವರು ಬಾಕಿ ಬಿಲ್ಲುಗಳನ್ನು ಪಾವತಿಸದೇ ಬಿಟ್ಟುಹೋಗಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…