ರಾಜ್ಯ

ಗಾಂಧೀಜಿ ಮೌಲ್ಯಗಳನ್ನು ಕೊಲ್ಲಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರನ್ನು ವಿರೋಧಿಗಳು ಗುಂಡಿಟ್ಟು ಕೊಂದಿರಬಹುದು. ಆದರೆ ಅವರ ಆದರ್ಶ ಮೌಲ್ಯಗಳನ್ನು ನಾಶಮಾಡಲು ಸಾಧ್ಯವಿಲ್ಲ. ಎಲ್ಲಿಯವರೆಗೆ ಅಸಮಾನತೆ, ಜಾತಿ ತಾರತಮ್ಯ, ಬಂಡವಾಳಶಾಹಿತ್ವ ಇರುತ್ತದೆಯೋ ಅಲ್ಲಿಯವರೆಗೂ ಗಾಂಧಿ ವಿಚಾರಗಳು ಭಾರತ ದೇಶದಲ್ಲಿ ಪ್ರಸ್ತುತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಗಾಂಧಿ ಹುತಾತ್ಮ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಗಾಂಧೀಜಿ ಅವರಿಗೆ ನಿಜವಾಗಿಯೂ ಗೌರವ ಸಲ್ಲಿಸುವುದು ಅಂದರೆ ಅವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಮೌಲ್ಯಗಳನ್ನು ನಾವುಗಳು ಪಾಲಿಸಿದಾಗ ಮಾತ್ರ ಅವರಿಗೆ ಕೊಡ ಗೌರವ. ಸತ್ಯ, ಅಹಿಂಸೆ, ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ತಂದುಕೊಟ್ಟರು. ಅವರ ಪಾಲನೆಯಲ್ಲಿ ಸಮಾಜ ಕಟ್ಟುವ ಕೆಲಸ ಮಾಡಿದಾಗ ಮಾತ್ರ ಗಾಂಧೀಜಿಗೆ ಗೌರವ ನೀಡಿದಂತೆ ಎಂದರು.

ಇದೇ ವೇಳೆ ಬಿಜೆಪಿ ಪಕ್ಷದ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿಯವರು ದೇಶವನ್ನು ಹಿಂದುತ್ವರಾಷ್ಟ್ರ ಮಾಡುತ್ತೇವೆ ಎಂದು ಹೊರಟಿದ್ದಾರೆ. ಏಕ ಭಾಷೆ ಏಕ ಸಂಹಿತೆ ಜಾರಿಗೆ ತರಲು ಹೊರಟಿದ್ದಾರೆ. ದೇಶದ ಸಂವಿಧಾನದ ಮೇಲೆ ಇತ್ತೀಚಿನ ದಿನಗಳಲ್ಲಿ ದಾಳಿಯಾಗುತ್ತಿದೆ. ಇದರ ರಕ್ಷಣೆಯಾದರೆ ಮಾತ್ರ ನಮಗೆ ಉಳಿಗಾಲ. ನಾವೆಲ್ಲರೂ ಈಗ ಎರಡನೇ ಹೋರಾಟ ಮಾಡಲು ಸಿದ್ದರಾಗಬೇಕು. ಕಾಂಗ್ರೆಸ್‌ ಕಾರ್ಯಕರ್ತರಿಂದ ಮಾತ್ರ ಸಂವಿಧಾನ ಉಳಿಸಲು ಸಾಧ್ಯ ಎಂದು ಸಿದ್ದರಾಮಯ್ಯ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ಬೆಂಗಳೂರು ಡೈರಿ : ರಾಜ್ಯ ಕಾಂಗ್ರೆಸ್‌ನ ಗೊಂದಲ, ವರಿಷ್ಠರ ಪ್ಲಾನ್ ವಿಫಲ

ಜನವರಿ ಮೊದಲ ವಾರದ ವೇಳೆಗೆ ಪುನಃ ಶುರುವಾಗಲಿದೆ ಬಂಡಾಯದ ಬಿರುಗಾಳಿ ರಾಜ್ಯ ಕಾಂಗ್ರೆಸ್‌ನ ಗೊಂದಲಕ್ಕೆ ಬ್ರೇಕ್ ಹಾಕಲು ದಿಲ್ಲಿಯ ಕಾಂಗ್ರೆಸ್…

1 hour ago

ಮದ್ಯವ್ಯಸನಕ್ಕೆ ಸಿಲುಕಿದ ಆದಿವಾಸಿಗಳು ; ಆಡಳಿತ ವರ್ಗ ಅರಿವು ಮೂಡಿಸಲಿ

ಚಾಮರಾಜಗರ ಜಿಲ್ಲೆಯ ಪವಿತ್ರ ಯಾತ್ರಾ ಸ್ಥಳವಾದ ಮೇಲೆ ಮಹದೇಶ್ವರ ಬೆಟ್ಟದ ಅಸುಪಾಸಿನಲ್ಲಿ ವಾಸಿಸುವ ಒಡಕಟ್ಟು ಜನರು ಮದ್ಯವ್ಯಸನಿಗಳಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವ…

2 hours ago

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…

15 hours ago

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…

16 hours ago

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…

16 hours ago

ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬಹಳ…

16 hours ago