ರಾಜ್ಯ

ಗಾಂಧೀಜಿ ಮೌಲ್ಯಗಳನ್ನು ಕೊಲ್ಲಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರನ್ನು ವಿರೋಧಿಗಳು ಗುಂಡಿಟ್ಟು ಕೊಂದಿರಬಹುದು. ಆದರೆ ಅವರ ಆದರ್ಶ ಮೌಲ್ಯಗಳನ್ನು ನಾಶಮಾಡಲು ಸಾಧ್ಯವಿಲ್ಲ. ಎಲ್ಲಿಯವರೆಗೆ ಅಸಮಾನತೆ, ಜಾತಿ ತಾರತಮ್ಯ, ಬಂಡವಾಳಶಾಹಿತ್ವ ಇರುತ್ತದೆಯೋ ಅಲ್ಲಿಯವರೆಗೂ ಗಾಂಧಿ ವಿಚಾರಗಳು ಭಾರತ ದೇಶದಲ್ಲಿ ಪ್ರಸ್ತುತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಗಾಂಧಿ ಹುತಾತ್ಮ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಗಾಂಧೀಜಿ ಅವರಿಗೆ ನಿಜವಾಗಿಯೂ ಗೌರವ ಸಲ್ಲಿಸುವುದು ಅಂದರೆ ಅವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಮೌಲ್ಯಗಳನ್ನು ನಾವುಗಳು ಪಾಲಿಸಿದಾಗ ಮಾತ್ರ ಅವರಿಗೆ ಕೊಡ ಗೌರವ. ಸತ್ಯ, ಅಹಿಂಸೆ, ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ತಂದುಕೊಟ್ಟರು. ಅವರ ಪಾಲನೆಯಲ್ಲಿ ಸಮಾಜ ಕಟ್ಟುವ ಕೆಲಸ ಮಾಡಿದಾಗ ಮಾತ್ರ ಗಾಂಧೀಜಿಗೆ ಗೌರವ ನೀಡಿದಂತೆ ಎಂದರು.

ಇದೇ ವೇಳೆ ಬಿಜೆಪಿ ಪಕ್ಷದ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿಯವರು ದೇಶವನ್ನು ಹಿಂದುತ್ವರಾಷ್ಟ್ರ ಮಾಡುತ್ತೇವೆ ಎಂದು ಹೊರಟಿದ್ದಾರೆ. ಏಕ ಭಾಷೆ ಏಕ ಸಂಹಿತೆ ಜಾರಿಗೆ ತರಲು ಹೊರಟಿದ್ದಾರೆ. ದೇಶದ ಸಂವಿಧಾನದ ಮೇಲೆ ಇತ್ತೀಚಿನ ದಿನಗಳಲ್ಲಿ ದಾಳಿಯಾಗುತ್ತಿದೆ. ಇದರ ರಕ್ಷಣೆಯಾದರೆ ಮಾತ್ರ ನಮಗೆ ಉಳಿಗಾಲ. ನಾವೆಲ್ಲರೂ ಈಗ ಎರಡನೇ ಹೋರಾಟ ಮಾಡಲು ಸಿದ್ದರಾಗಬೇಕು. ಕಾಂಗ್ರೆಸ್‌ ಕಾರ್ಯಕರ್ತರಿಂದ ಮಾತ್ರ ಸಂವಿಧಾನ ಉಳಿಸಲು ಸಾಧ್ಯ ಎಂದು ಸಿದ್ದರಾಮಯ್ಯ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

2 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

2 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

3 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

3 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

15 hours ago