ಬೆಂಗಳೂರು: ಮಹಾತ್ಮ ಗಾಂಧೀಜಿ ಅವರನ್ನು ವಿರೋಧಿಗಳು ಗುಂಡಿಟ್ಟು ಕೊಂದಿರಬಹುದು. ಆದರೆ ಅವರ ಆದರ್ಶ ಮೌಲ್ಯಗಳನ್ನು ನಾಶಮಾಡಲು ಸಾಧ್ಯವಿಲ್ಲ. ಎಲ್ಲಿಯವರೆಗೆ ಅಸಮಾನತೆ, ಜಾತಿ ತಾರತಮ್ಯ, ಬಂಡವಾಳಶಾಹಿತ್ವ ಇರುತ್ತದೆಯೋ ಅಲ್ಲಿಯವರೆಗೂ ಗಾಂಧಿ ವಿಚಾರಗಳು ಭಾರತ ದೇಶದಲ್ಲಿ ಪ್ರಸ್ತುತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಗಾಂಧಿ ಹುತಾತ್ಮ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಗಾಂಧೀಜಿ ಅವರಿಗೆ ನಿಜವಾಗಿಯೂ ಗೌರವ ಸಲ್ಲಿಸುವುದು ಅಂದರೆ ಅವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಮೌಲ್ಯಗಳನ್ನು ನಾವುಗಳು ಪಾಲಿಸಿದಾಗ ಮಾತ್ರ ಅವರಿಗೆ ಕೊಡ ಗೌರವ. ಸತ್ಯ, ಅಹಿಂಸೆ, ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ತಂದುಕೊಟ್ಟರು. ಅವರ ಪಾಲನೆಯಲ್ಲಿ ಸಮಾಜ ಕಟ್ಟುವ ಕೆಲಸ ಮಾಡಿದಾಗ ಮಾತ್ರ ಗಾಂಧೀಜಿಗೆ ಗೌರವ ನೀಡಿದಂತೆ ಎಂದರು.
ಇದೇ ವೇಳೆ ಬಿಜೆಪಿ ಪಕ್ಷದ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿಯವರು ದೇಶವನ್ನು ಹಿಂದುತ್ವರಾಷ್ಟ್ರ ಮಾಡುತ್ತೇವೆ ಎಂದು ಹೊರಟಿದ್ದಾರೆ. ಏಕ ಭಾಷೆ ಏಕ ಸಂಹಿತೆ ಜಾರಿಗೆ ತರಲು ಹೊರಟಿದ್ದಾರೆ. ದೇಶದ ಸಂವಿಧಾನದ ಮೇಲೆ ಇತ್ತೀಚಿನ ದಿನಗಳಲ್ಲಿ ದಾಳಿಯಾಗುತ್ತಿದೆ. ಇದರ ರಕ್ಷಣೆಯಾದರೆ ಮಾತ್ರ ನಮಗೆ ಉಳಿಗಾಲ. ನಾವೆಲ್ಲರೂ ಈಗ ಎರಡನೇ ಹೋರಾಟ ಮಾಡಲು ಸಿದ್ದರಾಗಬೇಕು. ಕಾಂಗ್ರೆಸ್ ಕಾರ್ಯಕರ್ತರಿಂದ ಮಾತ್ರ ಸಂವಿಧಾನ ಉಳಿಸಲು ಸಾಧ್ಯ ಎಂದು ಸಿದ್ದರಾಮಯ್ಯ ತಿಳಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…