ರಾಜ್ಯ

ಪ್ರಕೃತಿ ಚಿಕಿತ್ಸೆಗೆ ಗಾಂಧಿಜಿಯವರ ಕೊಡುಗೆ ಅಪಾರ: ದಿನೇಶ ಗುಂಡೂರಾವ್

ಬೆಂಗಳೂರು: ವೈದ್ಯಕೀಯ ಚಿಕಿತ್ಸಾ ಪದ್ಧತಿಗಳಲ್ಲಿ ಪ್ರಕೃತಿ ಚಿಕಿತ್ಸೆ ಅಥವಾ ನ್ಯಾಚುರೋಪಥಿ ಚಿಕಿತ್ಸೆ ಬಹಳ ಮಹತ್ವದ್ದು ಈ ನಿಟ್ಟಿನಲ್ಲಿ ಮಹಾತ್ಮ ಗಾಂಧಿಯವರು ಪ್ರಾರಂಭದಿಂದಲೆ ಈ ಚಿಕಿತ್ಸಾ ಪದ್ದತಿಗೆ ಹೆಚ್ಚಿನ ಒತ್ತು ಕೊಡುತಿದ್ದರು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೇಳಿದರು‌.

ಬೆಂಗಳೂರಿನ ಕುಮಾರಪಾರ್ಕ್ ರಸ್ತೆಯ ಗಾಂಧಿ ಭವನದಲ್ಲಿ ಕರ್ನಾಟಕ ಪ್ರದೇಶ ಪ್ರಕೃತಿ ಚಿಕಿತ್ಸಾ ಪರಿಷತ್, ಅಂತರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ಸಂಸ್ಥೆ (ಐ.ಎನ್.ಓ), ರಾಷ್ಟ್ರೀಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಅಕಾಡೆಮಿ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ವಿಧಿ ಸಹಯೋಗದಲ್ಲಿ ಡಾ.ಹೊ.ಶ್ರೀನಿವಾಸಯ್ಯ ಶತಮಾನೋತ್ಸವ ಪ್ರಯುಕ್ತ ಪ್ರಕೃತಿ ಚಿಕಿತ್ಸೆಗೆ ಮಹಾತ್ಮ ಗಾಂಧಿಯವರ ಕೊಡುಗೆ ಕುರಿತು ಶನಿವಾರ (ಆಗಸ್ಟ್ 11) ಆಯೋಜಿಸಿದ ವಿಚಾರ ಸಂಕೀರ್ಣ ಉದ್ಘಾಟಿಸಿ ಅವರು ಮಾತನಾಡಿದರು.

ಗಾಂಧಿಜಿಯವರು ಪ್ರಕೃತಿ ಚಿಕಿತ್ಸೆಯಲ್ಲಿ ಬಹಳ ಆಳವಾದ ನಂಬಿಕೆಯನಿಟ್ಟಿದ್ದರು ತಾವು ಹೋದಲೆಲ್ಲಾ ಅನೇಕರಿಗೆ ಇದರ ಬಗ್ಗೆಯೆ ಒತ್ತು ಹೇಳುತಿದ್ದರು ಜೊತೆಗೆ ತಾವು ಅದನ್ನೆ ಅನುಸರಿಸುತಿದ್ದರು ನಾವು ಕೂಡ ಪ್ರಕೃತಿ ಚಿಕಿತ್ಸಾ ಪದ್ದತಿಯನ್ನು ಉಳಿಸಿ ಬೇಳೆಸಬೇಕಿದೆ ಎಂದರು.

ಅಂತರಾಷ್ಟ್ರೀಯ ಪ್ರಾಕೃತಿಕ ಚಿಕಿತ್ಸಾ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷರಾದ ಅನಂತ ಬಿರಾದಾರ ಅವರು ಮಾತನಾಡಿ ಪ್ರಕೃತಿ ಚಿಕಿತ್ಸೆ ಪದ್ದತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದೇಶಾದ್ಯಂತ ಕೆಲಸ ಮಾಡುತ್ತಿದೆ ಆರೋಗ್ಯ ಕ್ಷೇತ್ರಕ್ಕೆ ಸರ್ಕಾರಗಳ ಬಜೆಟ್ ಕಡಿಮೆಯಾಗಬೆಕು ಮುನ್ನೆಚ್ಚರಿಕೆ ದೃಷ್ಟಿಯಿಂದ ಪ್ರತಿಯೊಬ್ಬರು ಪ್ರಕೃತಿ ಚಿಕಿತ್ಸೆಯನ್ನು ಅಳವಡಿಸಿಕೊಳ್ಳಬೇಕು ಇದಕ್ಕೆ ಸರ್ಕಾರಗಳು ಕೂಡ ಕೈಜೊಡಿಸಬೇಕು ಜನರಲ್ಲಿ ಇನ್ನು ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ ಎಂದರು.

ಐ.ಎನ್.ಓ ರಾಷ್ಟ್ರೀಯ ಉಪಾದ್ಯಕ್ಷರಾದ ಡಾ.ಹರಿಷ ಆರ್ ಮಾತನಾಡಿ ಪ್ರಾಕೃತಿಕ ಚಿಕಿತ್ಸಾ ಪದ್ದತಿಯ ಬೆಳವಣಿಗೆಯಲ್ಲಿ ಅನಂತ ಬಿರಾದಾರ ಅವರು ಕಳೆದ ಎರಡುವರೆ ದಶಕಗಳಿಂದ ಅಹರ್ನಿಶಿಯಾಗಿ ಶ್ರಮಿಸುತಿದ್ದಾರೆ ಅವರ ಸೇವೆಯನ್ನ ಗುರುತಿಸಬೇಕು ಮತ್ತು ಅವರ ಕೆಲಸಕ್ಕೆ ಸಹಕರಿಸಬೇಕು ಎಂದರು.

ಐ.ಎನ್.ಓ ರಾಜ್ಯದ್ಯಕ್ಷರಾದ ಡಾ.ಬಿ.ಟಿ ಚಿದಾನಂದ ಮೂರ್ತಿ ಅವರು ಯೋಗ, ಆಯುರ್ವೇದ, ಹೋಮಿಯೋಪತಿ ಮತ್ತು ಪ್ರಾಕೃತಿಕ ಚಿಕಿತ್ಸಾ ಕ್ಷೇತ್ರದ ಕುರಿತ ತಮ್ಮ ಬೇಡಿಕೆಗಳನ್ನು ಆರೋಗ್ಯ ಸಚಿವರಾದ ದಿನೇಶ ಗುಂಡುರಾವ ಅವರ ಮಂಡಿಸಿದರು ಸಚಿವರು ಕೂಡ ಸಕರಾತ್ಮಕವಾಗಿ ಸ್ಪಂದಿಸಿದರು.

ವಿಚಾರ ಸಂಕಿರಣದ ಅದ್ಯಕ್ಷತೆಯನ್ನು ನಾಡೋಜ ಡಾ.ವೂಡೆ ಕೃಷ್ಣ ವಹಿಸಿದ್ದರು ಡಾ.ವೆಂಕಟಾಚಲಪತಿ, ಡಾ.ರಾಜಶೇಖರ್, ಡಾ.ಜಗದೀಶ್ ಮತ್ತು ಡಾ.ವಿಕಾಸ ಕಾಮತ್ ಉಪನ್ಯಾಸ ಮಾಡಿದರು.

ಈ ಸಂದರ್ಭದಲ್ಲಿ ಐ.ಎನ್.ಓ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಸ್ವಾಮಿ, ರಾಜ್ಯ ಕಾರ್ಯದರ್ಶಿ ಯೋಗೆಂದ್ರ ಎದಲಾಪುರೆ ಸೇರಿದಂತೆ ಇತರರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

1 hour ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago